23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು.

ಅವರು ಜಾರಿಗೆ ತಂದಂತಹ ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ (Food Security Act), ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTE ಶಿಕ್ಷಣ ಹಕ್ಕು ಕಾಯ್ದೆ (Right to Education ) ಬಡ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು. RTI ಕ್ರಾಂತಿಕಾರಕವಾದ ಮಾಹಿತಿ ಹಕ್ಕು ಕಾನೂನು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿತು. ದೇಶಕ್ಕೆ ಕೊಡುಗೆಯಾಗಿರುವ ಅವರ ಸಾಧನೆಗಳು ಎಂದಿಗೂ ಅಜರಾಮರ.

ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬವರ್ಗದವರಿಗೆ ಹಾಗೂ ಕೋಟ್ಯಂತರ ಅಭಿಮಾನಿ ಬಳಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದ್ದಾರೆ.


Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ನಾಳ: ಹೆದ್ದಾರಿ ಮೇಲೆ ಉರುಳಿ ಬಿದ್ದ ಮರ, ಕಿಲೋಮೀಟರ್ ದೂರ ವಾಹನ ದಟ್ಟಣೆ

Suddi Udaya

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ:ಬೋಂಟ್ರೊಟ್ಟುಗುತ್ತು ದೈವಗಳ ಪುನರ್ ಪ್ರತಿಷ್ಠಾ ಕಲಶಾಭಿಷೇಕ ಮತ್ತು ನೇಮೋತ್ಸವ ‌‌

Suddi Udaya

ನ.19: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya
error: Content is protected !!