September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

ಬೆಳ್ತಂಗಡಿ.ಹಣಕಾಸು ಸಚಿವರಾಗಿ, ರಿಸರ್ವ್ ಬ್ಯಾಂಕ್ ಗೌವರ್ನರ್ ಆಗಿ, ಸತತ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿ ತಮ್ಮ ಜ್ಞಾನ ಮತ್ತು ಬದ್ಧತೆ ಮೂಲಕ ದೇಶಕ್ಕೆ ಸೇವೆ ಸಲ್ಲಿಸಿದ ವಿಶ್ವ ಕಂಡಂತಹ ಶ್ರೇಷ್ಠ ಆರ್ಥಿಕ ತಜ್ಞರಾದ ಡಾ. ಮನಮೋಹನ್ ಸಿಂಗ್ ಅವರು ಅಗಲಿದ ಸುದ್ದಿ ತಿಳಿದು ಅತೀವ ದುಃಖವಾಯಿತು.

ಅವರು ಜಾರಿಗೆ ತಂದಂತಹ ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತಾ ಕಾಯ್ದೆಯಂತಹ (Food Security Act), ಯೋಜನೆಗಳು ದೇಶದ ಕೋಟ್ಯಾಂತರ ಜನರ ಬಡತನವನ್ನು ನೀಗಿಸಿತು. RTE ಶಿಕ್ಷಣ ಹಕ್ಕು ಕಾಯ್ದೆ (Right to Education ) ಬಡ ಮಕ್ಕಳಿಗೂ ಪ್ರತಿಷ್ಠಿತ‌ ಶಾಲೆಗಳಲ್ಲಿ ಓದಲು ಅವಕಾಶ ಕಲ್ಪಿಸಿತು. RTI ಕ್ರಾಂತಿಕಾರಕವಾದ ಮಾಹಿತಿ ಹಕ್ಕು ಕಾನೂನು ಆಡಳಿತದಲ್ಲಿ ಪಾರದರ್ಶಕತೆಯನ್ನು ತಂದಿತು. ದೇಶಕ್ಕೆ ಕೊಡುಗೆಯಾಗಿರುವ ಅವರ ಸಾಧನೆಗಳು ಎಂದಿಗೂ ಅಜರಾಮರ.

ಮನಮೋಹನ್ ಸಿಂಗ್ ಅವರ ಆತ್ಮಕ್ಕೆ ಶಾಂತಿ ದೊರೆಯಲಿ, ಅವರ ಕುಟುಂಬವರ್ಗದವರಿಗೆ ಹಾಗೂ ಕೋಟ್ಯಂತರ ಅಭಿಮಾನಿ ಬಳಗದವರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ ಸೂಚಿಸಿದ್ದಾರೆ.


Related posts

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವ ಭಕ್ತರ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಮುಂಡಾಜೆ ಹಾ.ಉ. ಸ. ಸಂಘದ ಕಾರ್‍ಯದರ್ಶಿ ದಿ| ಅಶೋಕ್ ಕುಮಾರ್ ರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya
error: Content is protected !!