ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆಯು ಡಿ.೩೧ರಂದು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿ ಮೊಕ್ತೇಸರ ಶೀತಲ್ ಪಡಿವಾಳರ ಮಾರ್ಗದರ್ಶನದಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ನಡೆಯಲಿದೆ.

ಡಿ.31ರಂದು ಬೆಳಿಗ್ಗೆ ಭಂಡಾರ ಚಾವಡಿಯಲ್ಲಿ ಪ್ರಾರ್ಥನೆ ಪುಣ್ಯಾಹ ಕಲಶ ದೈವಗಳ ಭಂಡಾರ ಇಳಿಸುವುದು, ಮೂಲ ಸ್ಥಾನದಲ್ಲಿ ತೋರಣ ಮುಹೂರ್ತ, ನಾಗ ಸನ್ನಿಧಿಯಲ್ಲಿ ತನು-ತಂಬಿಲ ಸೇವೆ, ದೈವಸ್ಥಾನದಲ್ಲಿ ಪ್ರಧಾನ, ದೈವಗಳಿಗೆ ಕಲಶಾಭಿಷೇಕ ಪರ್ವ ನಡೆಯಲಿರುವುದು. ಸಂಜೆ ದೈವಗಳ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಶ್ರೀ ನಾರಾಯಣ ಸ್ವಾಮಿ ಸೇವಾ ಸಂಘದಿಂದ ಕೆ. ವಸಂತ ಬಂಗೇರ ರವರಿಗೆ ಗೌರವಾರ್ಪಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ :ಪುದುವೆಟ್ಟು ಶ್ರೀ ನಾರಾಯಣ ಗುರು ಬಿಲ್ಲವ ಸೇವಾ ಸಂಘದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಿಗೆ ಷೂ ಎಸೆದ ಪ್ರಕರಣ ತನಿಖೆ ನಡೆಸಿ ಆರೋಪಿಯ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ: ರಕ್ಷಿತ್ ಶಿವರಾಂ

Suddi Udaya
error: Content is protected !!