July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆಯು ಡಿ.೩೧ರಂದು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿ ಮೊಕ್ತೇಸರ ಶೀತಲ್ ಪಡಿವಾಳರ ಮಾರ್ಗದರ್ಶನದಲ್ಲಿ ಮದ್ದಡ್ಕ ಶ್ರೀನಿವಾಸ ಅಮ್ಮಣ್ಣಾಯ ಅಸ್ರಣ್ಣರ ನೇತೃತ್ವದಲ್ಲಿ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ನಡೆಯಲಿದೆ.

ಡಿ.31ರಂದು ಬೆಳಿಗ್ಗೆ ಭಂಡಾರ ಚಾವಡಿಯಲ್ಲಿ ಪ್ರಾರ್ಥನೆ ಪುಣ್ಯಾಹ ಕಲಶ ದೈವಗಳ ಭಂಡಾರ ಇಳಿಸುವುದು, ಮೂಲ ಸ್ಥಾನದಲ್ಲಿ ತೋರಣ ಮುಹೂರ್ತ, ನಾಗ ಸನ್ನಿಧಿಯಲ್ಲಿ ತನು-ತಂಬಿಲ ಸೇವೆ, ದೈವಸ್ಥಾನದಲ್ಲಿ ಪ್ರಧಾನ, ದೈವಗಳಿಗೆ ಕಲಶಾಭಿಷೇಕ ಪರ್ವ ನಡೆಯಲಿರುವುದು. ಸಂಜೆ ದೈವಗಳ ನೇಮೋತ್ಸವ, ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟ್‌ನ ಪದಾಧಿಕಾರಿಗಳು ತಿಳಿಸಿದ್ದಾರೆ.

Related posts

ಗೇರುಕಟ್ಟೆ ಸೌಹಾರ್ದ ಟ್ರೋಫಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸೇವಾ ಪ್ರತಿನಿಧಿಗಳ ಸಭೆ

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
error: Content is protected !!