25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೀಜಾಡಿಯ ಯೋಧ ಅನೂಪ್ ಪೂಜಾರಿಯವರ ಶವ ಪೆಟ್ಟಿಗೆಗೆ ಹೆಗಲು ಕೊಟ್ಟ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ಜಮ್ಮು ಕಾಶ್ಮೀರದ ಪೂಂಛ್‌ನಲ್ಲಿ ಡಿ.25ರಂದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಕುಂದಾಪುರದ ಬೀಜಾಡಿಯ ಯೋಧ ಲ್ಯಾನ್ಸ್ ಹವಾಲ್ದಾರ್ ಅನೂಪ್ ಪೂಜಾರಿ (31ವ) ರವರ ಪಾರ್ಥಿವ ಶರೀರ ಡಿ.26ರಂದು ತಡರಾತ್ರಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಸೇನಾ ವಿಮಾನದಲ್ಲಿ ಆಗಮಿಸಿತು.

ಪಾರ್ಥಿವ ಶರೀರವನ್ನು ವಿಮಾನ ನಿಲ್ದಾಣದಲ್ಲಿ ಸಕಲ ಸರಕಾರಿ, ಸೇನಾ ಗೌರವದೊಂದಿಗೆ ಸ್ವೀಕರಿಸಲಾಯಿತು. ದಕ್ಷಿಣ ಕನ್ನಡ ಸಂಸದ ಕ್ಯಾ| ಬ್ರಿಜೇಶ್ ಚೌಟ ಅವರು ವಿಮಾನದಿಂದ ಶರೀರವನ್ನು ಹೊರಗೆ ತೆಗೆಯುವ ವೇಳೆ ಶವ ಪಟ್ಟಿಗೆಗೆ ಹೆಗಲು ನೀಡಿದರು. ಮಾಜಿ ‘ಯೋಧರಾಗಿರುವ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್. ಜತೆಗೂಡಿದರು. ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಜತೆಗಿದ್ದರು. ಬಳಿಕ ಅಂತಿಮ ನಮನ ಸಲ್ಲಿಸಿ, ಉಡುಪಿಗೆ ಬೀಳ್ಕೊಡಲಾಯಿತು.

Related posts

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಸರ್ವರ್ ಸಮಸ್ಯೆಯಿಂದ ಪಡಿತರ ವಿತರಣೆಗೆ ಅಡ್ಡಿ: ಗ್ರಾಹಕರ ಪರದಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

Suddi Udaya
error: Content is protected !!