July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಡಿ.28 ರಿಂದ ಜ.1 ರವರೆಗೆ ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ಇಂದು ಬೆಳಿಗ್ಗೆ ಊರವರಿಂದ ಹೊರೆಕಾಣಿಕೆ ಸಮರ್ಪಿಸಲಾಯಿತು, ನಂತರ ತಂತ್ರಿಗಳ ಆಗಮನ, ಮಧ್ಯಾಹ್ನ ತೋರಣ ಮುಹೂರ್ತ, ಧ್ವಜಾರೋಹಣ, ಮಹಾಪೂಜೆ ನಡೆಯಿತು. ರಾತ್ರಿ ಪೂಜಾ ಉತ್ಸವ ನಡೆಯಲಿದೆ.


ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಗೋಪಾಲ ಶೆಟ್ಟಿ ಕೋರ್‍ಯಾರು, ಪ್ರಧಾನ ಅರ್ಚಕ ಪ್ರಸನ್ನ ಭಟ್, ಪ್ರಧಾನ ಕಾರ್ಯದರ್ಶಿ ವಿಮಲಾಕ್ಷ ಗೌಡ ಪಡ್ಪು, ಮಹಿಳಾ ಸಮಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ, ಯುವ ಸಮಿತಿ ಅಧ್ಯಕ್ಷ ನಿತೇಶ ಕೆ. ಓಡಿಲ್ನಾಳ, ಹಾಗೂ ಟ್ರಸ್ಟಿಗಳು, ಯುವ ಸಮಿತಿ, ಭಜನಾ ಸಮಿತಿ, ಮಹಿಳಾ ಸಮಿತಿಯ ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು.

Related posts

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಗೂಡ್ಸ್ ವಾಹನ ಪಲ್ಟಿ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ: ಕುಂಟಿನಿ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸಕ್ಕೆ ಶೇ.100 ಫಲಿತಾಂಶ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya
error: Content is protected !!