22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

ಬೆಳ್ತಂಗಡಿ: ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಲ್ಲಿ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 233 ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು 237000 ಮಾಶಾಸನ ನೀಡಲಾಗುತ್ತಿದ್ದು ಇದರಲ್ಲಿ ತೀರಾ ಅಸಹಾಯಕ ವಾಗಿರುವ 12 ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಮಂಜುರಾದ ದಿನ ಬಳಕೆ ವಸ್ತುಗಳಾದ ಬಟ್ಟೆ ಚಾಪೆ ತಲೆದಿಂಬು, ಬೆಡ್ ಶಿಟ್ ಹಾಗೂ ಆಹಾರ ಕಿಟ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ನಿರ್ದೇಶಕರಾದ ವಿಠಲ ಪೂಜಾರಿ, ಉಡುಪಿ ಪ್ರಾದೇಶಿಕ ವ್ಯಾಪ್ತಿಯ ಜ್ಞಾನ ವಿಕಾಸ ಯೋಜನಾಧಿಕಾರಿಯವರಾದ ಅಮೃತಾ ಹಾಗೂ ತಾಲೂಕಿನ ಯೋಜನಾಧಿಕಾರಿಯವರಾದ ಸುರೇಂದ್ರ ಉಪಸ್ಥಿತರಿದ್ದು ಸದಸ್ಯರ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಅವಶ್ಯಕತೆಗಳ ಬಗ್ಗೆ ಗುರುತಿಸಿ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರ, ಸ್ಥಳೀಯ ಸೇವಾಪ್ರತಿನಿಧಿಗಳು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗೇರುಕಟ್ಟೆಯಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ನದಿಗೆ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Suddi Udaya

ಬೆಳ್ತಂಗಡಿಯಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಹಸಿರು ಹೊರೆಕಾಣಿಕೆ: ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!