September 6, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಧರ್ಮಸ್ಥಳದ ಕು. ಸೌಖ್ಯ ಎಸ್. ಜೈನ್ ಮಂಡಿಸಿದ ಸಂಶೋಧನಾ ಪ್ರಬಂಧಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ದಾಖಲೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya
error: Content is protected !!