September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ”ದ ಪೂರ್ವಭಾವಿ ಸಭೆಯು ಡಿ.28 ರಂದು ವಿದ್ವತ್ ಪಿಯು ಕಾಲೇಜು, ಗುರುವಾಯನಕೆರೆಯಲ್ಲಿ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಕಾರ್ಯದರ್ಶಿ ರಾಕೇಶ್ ಹೆಗ್ಡೆ ಬಳಂಜ, ನಿಕಟಪೂರ್ವ ಕಾರ್ಯದರ್ಶಿ ಗುರುಪ್ರಕಾಶ್ ಭಟ್, ಜೊತೆ ಕಾರ್ಯದರ್ಶಿ ಶಂಕರ್ ರಾವ್, ನಿಕಟ ಪೂರ್ವ ಜೊತೆ ಕಾರ್ಯದರ್ಶಿ, ಇಮ್ರಾನ್ ಬೆಳ್ತಂಗಡಿ ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿ ಕಾಶೀನಾಥ್. ಕೆ, ಹಾಗೂ ಕಾರ್ಯದರ್ಶಿ ಪ್ರಜ್ವಲ್ ರೈ ಇವರು ಉಪಸ್ಥಿತರಿದ್ದರು.

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಜ. 4 ರಂದು ರಾತ್ರಿ ಗಂಟೆ 7.30 ಕ್ಕೆ ಪ್ರಾರಂಭಗೊಳ್ಳಲಿದ್ದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.ಕ್ರೀಡಾಂಗಣದ ಉದ್ಘಾಟನೆಯನ್ನು ತಹಶೀಲ್ದಾರರು
ಪೃಥ್ವಿ ಸಾನಿಕಂ ನಡೆಸಲಿರುವರು ಎಂದು ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಇವರು ಪ್ರಕಟಣೆಯಲ್ಲಿ ತಿಳಿಸಿದರು.

ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿಯಾದ ಕಾಶೀನಾಥ್. ಕೆ ರವರು ಮಾತನಾಡಿ ತಾಲೂಕಿನ ಹಲವಾರು ಪ್ರತಿಷ್ಠಿತ ತಂಡಗಳು ಹಾಗೂ ಮಹಿಳೆಯರ ಆಹ್ವಾನಿತ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ನ ಜೊತೆ ಕಾರ್ಯದರ್ಶಿ ಶಂಕರ್ ರಾವ್ ರವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುಖ್ಯ ಅಥಿತಿಗಳ ಬಗ್ಗೆ ಮಾಹಿತಿ ನೀಡಿ, ವಂದಿಸಿದರು.

Related posts

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಕನ್ಯಾಡಿ : ಹಿಂದೂ ಸಂಘಟಕರಿಂದ ಹನುಮಾನ್ ಚಾಲೀಸಾ ಪಠಣ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ಬೆಳ್ತಂಗಡಿ ಅನುಗ್ರಹ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ರೂ.4.75 ಲಕ್ಷ ಸಾಲ ಪಡೆದು ವಂಚನೆ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya
error: Content is protected !!