25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

ವೇಣೂರು: ವೇಣೂರಿನಲ್ಲಿ ಸುದ್ದಿ ಉದಯ ಮತ್ತು ಇತರ ಪತ್ರಿಕೆಗಳ ವಿತರಕರಾಗಿರುವ, ಯಕ್ಷಗಾನ ಕಲಾವಿದರೂ, ವ್ಯಾಪಾರಿಗಳು ಆಗಿ, ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾರಾಯಣ ಕನಡ ಮತ್ತು ವಾರಿಜ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಸಂಭ್ರಮ ಡಿ. 29 ರಂದು ವೇಣೂರು ಬಾಹುಬಲಿ ಸಭಾಂಗಣದಲ್ಲಿ ನಡೆಯಿತು.
ಕಾಯ೯ಕ್ರಮವನ್ನು ದೀಪ ಬೆಳಗಿಸಿ ಹಾಗೂ ಪರಸ್ಪರ ಹಾರ ವಿನಿಮಯ ಮಾಡಿಕೊಳ್ಳುವ ಮೂಲಕ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ ನಡೆಯುತು.

ಉಜಿರೆ ಎಸ್‌. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ. ಸುಬ್ರಹ್ಮಣ್ಯ ಭಟ್ ಕಜೆ, ಅಂಡಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಅಂಡಿಂಜೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಮೋಹನ ಅಂಡಿಂಜೆ, ವೇಣೂರು ಪಲ್ಗುಣಿ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಜಯರಾಜ್

ವಿ . ಎಸ್. ಅವರು ನಾರಾಯಣ ಕನಡ ಅವರು ಸಾಧನೆಗಳು ಹಾಗೂ ಅವರ ಸಾಮಾಜಿಕ ಸೇವಾ ಚಟುವಟಿಕೆಗಳ ಬಗ್ಗೆ ಮಾತನಾಡಿ ,ಶುಭ ಹಾರೈಸಿದರು. ವೇಣೂರು ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್. ಮಹಮ್ಮದ್ ಅನಿಸಿಕೆ ವ್ಯಕ್ತಪಡಿಸಿ, ತಾನು ಪತ್ರಕರ್ತನಾಗಲು ನಾರಾಯಣ ಕನಡ ಅವರೇ ಪ್ರೇರಣೆ ಎಂದು ತಿಳಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಗಣ್ಯರು,ಜನಪ್ರತಿನಿದಿನಗಳು, ವರ್ತಕರು, ಕುಟುಂಬಸ್ಥರು, ಅಭಿಮಾನಿಗಳು ಹಾಜರಿದ್ದು ಶುಭ ಕೋರಿದರು.

ನಾರಾಯಣ ಕನಡ ಅವರ ಪುತ್ರರಾದ ಸತೀಶ್ ಕೆ., ರಮೇಶ್ ಕೆ. ಎನ್., ಮಲ್ಲಿಕಾ, ಅಳಿಯ ವಸಂತ ಕುಮಾ‌ರ್, ಸೊಸೆಯಂದಿರಾದ ಪ್ರಮೀಳಾ, ಶರ್ಮಿಳಾ, ಬಂಧು ಮಿತ್ರರು ಸಹಕರಿಸಿದರು. ಕಾರ್ಯಕ್ರಮದ ಮೊದಲು ಕಲ್ಲಡ್ಕ ವಿಠಲ ನಾಯಕ್ ರವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಅವರ ಮೊಮ್ಮಕ್ಕಳು ಪ್ರಾರ್ಥಿಸಿದರು. ಹಿರಿಯ ಪುತ್ರ ಸತೀಶ್ ಕೆ. ಸ್ವಾಗತಿಸಿದರು. ಉಪನ್ಯಾಸಕ ಮಹಾವೀರ ಜೈನ್ ನಿರೂಪಿಸಿದರು.

Related posts

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ : ಸಂಸದ ಕ್ಯಾ.ಬ್ರಿಜೇಶ್ ಚೌಟರವರಿಂದ ಪ್ರಧಾನಮಂತ್ರಿ ಭಾರತೀಯ ಜನ ಔಷಧಿ ಕೇಂದ್ರದ ಉದ್ಘಾಟನೆ, ವಿವಿಧ ಕ್ಷೇತ್ರದ ಸಾಧಕರಿಗೆ ಅಭಿನಂದನೆ ಹಾಗೂ ಉಚಿತ ಮಧುಮೇಹ ಪರೀಕ್ಷಾ ಶಿಬಿರ

Suddi Udaya
error: Content is protected !!