26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ರಾಮಚಂದ್ರ ರವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪಡಂಗಡಿ ಗ್ರಾಮ‌ ಪಂಚಾಯತ್ ನಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!