24 C
ಪುತ್ತೂರು, ಬೆಳ್ತಂಗಡಿ
April 3, 2025
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಡಿ.17: ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ

Suddi Udaya

ಫೆ.1-5: ನಿಟ್ಟಡೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರ ಬರ್ಕಜೆಯಲ್ಲಿ 9ನೇ ವರ್ಷದ ಜಾತ್ರಾ ಮಹೋತ್ಸವ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!