April 2, 2025
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ವ್ಯವಹಾರದಲ್ಲಿ ಸಾಧಿಸಿದ ಸರ್ವತೋಮುಖ ಪ್ರಗತಿಯನ್ನು ಗುರುತಿಸಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಾಧನಾ ಪ್ರಶಸ್ತಿ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya
error: Content is protected !!