September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ”ದ ಪೂರ್ವಭಾವಿ ಸಭೆಯು ಡಿ.28 ರಂದು ವಿದ್ವತ್ ಪಿಯು ಕಾಲೇಜು, ಗುರುವಾಯನಕೆರೆಯಲ್ಲಿ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಕಾರ್ಯದರ್ಶಿ ರಾಕೇಶ್ ಹೆಗ್ಡೆ ಬಳಂಜ, ನಿಕಟಪೂರ್ವ ಕಾರ್ಯದರ್ಶಿ ಗುರುಪ್ರಕಾಶ್ ಭಟ್, ಜೊತೆ ಕಾರ್ಯದರ್ಶಿ ಶಂಕರ್ ರಾವ್, ನಿಕಟ ಪೂರ್ವ ಜೊತೆ ಕಾರ್ಯದರ್ಶಿ, ಇಮ್ರಾನ್ ಬೆಳ್ತಂಗಡಿ ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿ ಕಾಶೀನಾಥ್. ಕೆ, ಹಾಗೂ ಕಾರ್ಯದರ್ಶಿ ಪ್ರಜ್ವಲ್ ರೈ ಇವರು ಉಪಸ್ಥಿತರಿದ್ದರು.

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಜ. 4 ರಂದು ರಾತ್ರಿ ಗಂಟೆ 7.30 ಕ್ಕೆ ಪ್ರಾರಂಭಗೊಳ್ಳಲಿದ್ದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.ಕ್ರೀಡಾಂಗಣದ ಉದ್ಘಾಟನೆಯನ್ನು ತಹಶೀಲ್ದಾರರು
ಪೃಥ್ವಿ ಸಾನಿಕಂ ನಡೆಸಲಿರುವರು ಎಂದು ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಇವರು ಪ್ರಕಟಣೆಯಲ್ಲಿ ತಿಳಿಸಿದರು.

ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿಯಾದ ಕಾಶೀನಾಥ್. ಕೆ ರವರು ಮಾತನಾಡಿ ತಾಲೂಕಿನ ಹಲವಾರು ಪ್ರತಿಷ್ಠಿತ ತಂಡಗಳು ಹಾಗೂ ಮಹಿಳೆಯರ ಆಹ್ವಾನಿತ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ನ ಜೊತೆ ಕಾರ್ಯದರ್ಶಿ ಶಂಕರ್ ರಾವ್ ರವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುಖ್ಯ ಅಥಿತಿಗಳ ಬಗ್ಗೆ ಮಾಹಿತಿ ನೀಡಿ, ವಂದಿಸಿದರು.

Related posts

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಮತ್ತು ಸೈಕಲ್ ಪ್ಯೂರ್ ಅಗರಬತ್ತಿ ಸಂಸ್ಥೆಯ ಸಹ ಬ್ರಾಂಡಿಂಗ್ ನೂತನವಾಗಿ ತಯಾರಿಸಲಾದ ಅಗರಬತ್ತಿಗಳ ಲೋಕಾರ್ಪಣೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಬೆಳ್ತಂಗಡಿ: ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ತಹಶೀಲ್ದಾರ್ ಟಪ್ಪಾಲು ಮೂಲಕ ಮನವಿ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya
error: Content is protected !!