23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ”ದ ಪೂರ್ವಭಾವಿ ಸಭೆಯು ಡಿ.28 ರಂದು ವಿದ್ವತ್ ಪಿಯು ಕಾಲೇಜು, ಗುರುವಾಯನಕೆರೆಯಲ್ಲಿ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಕಾರ್ಯದರ್ಶಿ ರಾಕೇಶ್ ಹೆಗ್ಡೆ ಬಳಂಜ, ನಿಕಟಪೂರ್ವ ಕಾರ್ಯದರ್ಶಿ ಗುರುಪ್ರಕಾಶ್ ಭಟ್, ಜೊತೆ ಕಾರ್ಯದರ್ಶಿ ಶಂಕರ್ ರಾವ್, ನಿಕಟ ಪೂರ್ವ ಜೊತೆ ಕಾರ್ಯದರ್ಶಿ, ಇಮ್ರಾನ್ ಬೆಳ್ತಂಗಡಿ ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿ ಕಾಶೀನಾಥ್. ಕೆ, ಹಾಗೂ ಕಾರ್ಯದರ್ಶಿ ಪ್ರಜ್ವಲ್ ರೈ ಇವರು ಉಪಸ್ಥಿತರಿದ್ದರು.

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಜ. 4 ರಂದು ರಾತ್ರಿ ಗಂಟೆ 7.30 ಕ್ಕೆ ಪ್ರಾರಂಭಗೊಳ್ಳಲಿದ್ದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.ಕ್ರೀಡಾಂಗಣದ ಉದ್ಘಾಟನೆಯನ್ನು ತಹಶೀಲ್ದಾರರು
ಪೃಥ್ವಿ ಸಾನಿಕಂ ನಡೆಸಲಿರುವರು ಎಂದು ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಇವರು ಪ್ರಕಟಣೆಯಲ್ಲಿ ತಿಳಿಸಿದರು.

ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿಯಾದ ಕಾಶೀನಾಥ್. ಕೆ ರವರು ಮಾತನಾಡಿ ತಾಲೂಕಿನ ಹಲವಾರು ಪ್ರತಿಷ್ಠಿತ ತಂಡಗಳು ಹಾಗೂ ಮಹಿಳೆಯರ ಆಹ್ವಾನಿತ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ನ ಜೊತೆ ಕಾರ್ಯದರ್ಶಿ ಶಂಕರ್ ರಾವ್ ರವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುಖ್ಯ ಅಥಿತಿಗಳ ಬಗ್ಗೆ ಮಾಹಿತಿ ನೀಡಿ, ವಂದಿಸಿದರು.

Related posts

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸೆ.14: ಗುರುವಂದನ ಕಾರ್ಯಕ್ರಮಕ್ಕೆ ಬಹರೈನ್ ಹಾಗೂ ದುಬೈಗೆ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಶ್ರೀಗಳ ಯಾತ್ರೆ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಾಲಾಡಿ: ಊರ್ಲ ರಸ್ತೆ ಕಾಂಕ್ರೀಟಿಕರಣಕ್ಕೆ ಒಂದು ಕೋಟಿ ರೂಪಾಯಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನ, ಹತ್ತು ದಿನದೊಳಗೆ ಕಾಮಗಾರಿ ಪ್ರಾರಂಭ

Suddi Udaya
error: Content is protected !!