July 23, 2026
ಗ್ರಾಮಾಂತರ ಸುದ್ದಿ

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

ವೇಣೂರು: ವೇಣೂರಿನಲ್ಲಿ ಸುದ್ದಿ ಉದಯ ಮತ್ತು ಇತರ ಪತ್ರಿಕೆಗಳ ವಿತರಕರಾಗಿರುವ, ಯಕ್ಷಗಾನ ಕಲಾವಿದರೂ, ವ್ಯಾಪಾರಿಗಳು ಆಗಿ, ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾರಾಯಣ ಕನಡ ಮತ್ತು ವಾರಿಜ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಸಂಭ್ರಮ ಡಿ. 29 ರಂದು ವೇಣೂರು ಬಾಹುಬಲಿ ಸಭಾಂಗಣದಲ್ಲಿ ನಡೆಯಿತು.
ಕಾಯ೯ಕ್ರಮವನ್ನು ದೀಪ ಬೆಳಗಿಸಿ ಹಾಗೂ ಪರಸ್ಪರ ಹಾರ ವಿನಿಮಯ ಮಾಡಿಕೊಳ್ಳುವ ಮೂಲಕ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ ನಡೆಯುತು.

ಉಜಿರೆ ಎಸ್‌. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ. ಸುಬ್ರಹ್ಮಣ್ಯ ಭಟ್ ಕಜೆ, ಅಂಡಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಅಂಡಿಂಜೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಮೋಹನ ಅಂಡಿಂಜೆ, ವೇಣೂರು ಪಲ್ಗುಣಿ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಜಯರಾಜ್

ವಿ . ಎಸ್. ಅವರು ನಾರಾಯಣ ಕನಡ ಅವರು ಸಾಧನೆಗಳು ಹಾಗೂ ಅವರ ಸಾಮಾಜಿಕ ಸೇವಾ ಚಟುವಟಿಕೆಗಳ ಬಗ್ಗೆ ಮಾತನಾಡಿ ,ಶುಭ ಹಾರೈಸಿದರು. ವೇಣೂರು ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್. ಮಹಮ್ಮದ್ ಅನಿಸಿಕೆ ವ್ಯಕ್ತಪಡಿಸಿ, ತಾನು ಪತ್ರಕರ್ತನಾಗಲು ನಾರಾಯಣ ಕನಡ ಅವರೇ ಪ್ರೇರಣೆ ಎಂದು ತಿಳಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಗಣ್ಯರು,ಜನಪ್ರತಿನಿದಿನಗಳು, ವರ್ತಕರು, ಕುಟುಂಬಸ್ಥರು, ಅಭಿಮಾನಿಗಳು ಹಾಜರಿದ್ದು ಶುಭ ಕೋರಿದರು.

ನಾರಾಯಣ ಕನಡ ಅವರ ಪುತ್ರರಾದ ಸತೀಶ್ ಕೆ., ರಮೇಶ್ ಕೆ. ಎನ್., ಮಲ್ಲಿಕಾ, ಅಳಿಯ ವಸಂತ ಕುಮಾ‌ರ್, ಸೊಸೆಯಂದಿರಾದ ಪ್ರಮೀಳಾ, ಶರ್ಮಿಳಾ, ಬಂಧು ಮಿತ್ರರು ಸಹಕರಿಸಿದರು. ಕಾರ್ಯಕ್ರಮದ ಮೊದಲು ಕಲ್ಲಡ್ಕ ವಿಠಲ ನಾಯಕ್ ರವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಅವರ ಮೊಮ್ಮಕ್ಕಳು ಪ್ರಾರ್ಥಿಸಿದರು. ಹಿರಿಯ ಪುತ್ರ ಸತೀಶ್ ಕೆ. ಸ್ವಾಗತಿಸಿದರು. ಉಪನ್ಯಾಸಕ ಮಹಾವೀರ ಜೈನ್ ನಿರೂಪಿಸಿದರು.

Related posts

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಗೇರುಕಟ್ಟೆ: ಮಾನವೀಯತೆ ಮೆರೆದ ಕಳಿಯ ಗ್ರಾ.ಪಂ.ಕಾರ್ಯದರ್ಶಿ ಕುಂಞ ಕೆ., ಕಳಿಯ ಸಿ.ಎಚ್.ಓ. ಮತ್ತು ಸಿಬ್ಬಂದಿ

Suddi Udaya

ಸೌತಡ್ಕ ದೇವಸ್ಥಾನದ ವತಿಯಿಂದ ಶ್ರೀಮತಿ ಶುಭ ಮರಾಟೆ ರವರಿಗೆ ರೂ 40ಸಾವಿರ ಚೆಕ್ ಹಸ್ತಾಂತರ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya
error: Content is protected !!