25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

ವೇಣೂರು: ವೇಣೂರಿನಲ್ಲಿ ಸುದ್ದಿ ಉದಯ ಮತ್ತು ಇತರ ಪತ್ರಿಕೆಗಳ ವಿತರಕರಾಗಿರುವ, ಯಕ್ಷಗಾನ ಕಲಾವಿದರೂ, ವ್ಯಾಪಾರಿಗಳು ಆಗಿ, ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾರಾಯಣ ಕನಡ ಮತ್ತು ವಾರಿಜ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ ಸಂಭ್ರಮ ಡಿ. 29 ರಂದು ವೇಣೂರು ಬಾಹುಬಲಿ ಸಭಾಂಗಣದಲ್ಲಿ ನಡೆಯಿತು.
ಕಾಯ೯ಕ್ರಮವನ್ನು ದೀಪ ಬೆಳಗಿಸಿ ಹಾಗೂ ಪರಸ್ಪರ ಹಾರ ವಿನಿಮಯ ಮಾಡಿಕೊಳ್ಳುವ ಮೂಲಕ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ ನಡೆಯುತು.

ಉಜಿರೆ ಎಸ್‌. ಡಿ. ಎಂ. ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ. ಸುಬ್ರಹ್ಮಣ್ಯ ಭಟ್ ಕಜೆ, ಅಂಡಿಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಅಂಡಿಂಜೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಮೋಹನ ಅಂಡಿಂಜೆ, ವೇಣೂರು ಪಲ್ಗುಣಿ ಸೇವಾ ಸಂಘದ ಸ್ಥಾಪಕ ಅಧ್ಯಕ್ಷ ಜಯರಾಜ್

ವಿ . ಎಸ್. ಅವರು ನಾರಾಯಣ ಕನಡ ಅವರು ಸಾಧನೆಗಳು ಹಾಗೂ ಅವರ ಸಾಮಾಜಿಕ ಸೇವಾ ಚಟುವಟಿಕೆಗಳ ಬಗ್ಗೆ ಮಾತನಾಡಿ ,ಶುಭ ಹಾರೈಸಿದರು. ವೇಣೂರು ಸಹಕಾರ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹೆಚ್. ಮಹಮ್ಮದ್ ಅನಿಸಿಕೆ ವ್ಯಕ್ತಪಡಿಸಿ, ತಾನು ಪತ್ರಕರ್ತನಾಗಲು ನಾರಾಯಣ ಕನಡ ಅವರೇ ಪ್ರೇರಣೆ ಎಂದು ತಿಳಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಗಣ್ಯರು,ಜನಪ್ರತಿನಿದಿನಗಳು, ವರ್ತಕರು, ಕುಟುಂಬಸ್ಥರು, ಅಭಿಮಾನಿಗಳು ಹಾಜರಿದ್ದು ಶುಭ ಕೋರಿದರು.

ನಾರಾಯಣ ಕನಡ ಅವರ ಪುತ್ರರಾದ ಸತೀಶ್ ಕೆ., ರಮೇಶ್ ಕೆ. ಎನ್., ಮಲ್ಲಿಕಾ, ಅಳಿಯ ವಸಂತ ಕುಮಾ‌ರ್, ಸೊಸೆಯಂದಿರಾದ ಪ್ರಮೀಳಾ, ಶರ್ಮಿಳಾ, ಬಂಧು ಮಿತ್ರರು ಸಹಕರಿಸಿದರು. ಕಾರ್ಯಕ್ರಮದ ಮೊದಲು ಕಲ್ಲಡ್ಕ ವಿಠಲ ನಾಯಕ್ ರವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಿತು. ಅವರ ಮೊಮ್ಮಕ್ಕಳು ಪ್ರಾರ್ಥಿಸಿದರು. ಹಿರಿಯ ಪುತ್ರ ಸತೀಶ್ ಕೆ. ಸ್ವಾಗತಿಸಿದರು. ಉಪನ್ಯಾಸಕ ಮಹಾವೀರ ಜೈನ್ ನಿರೂಪಿಸಿದರು.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ನಾಳೆ(ಜ.31) ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ಭಾಸ್ಕರ ಪರ್ವ”: ಪ್ರಾಧ್ಯಾಪಕ ಡಾ.ಭಾಸ್ಕರ ಹೆಗಡೆಗೆ ಅಭಿನಂದನೆ

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಅಮೇರಿಕಾದ ಪ್ರತಿಷ್ಠಿತ ಹಾರ್ವರ್ಡ್ ಯೂನಿವರ್ಸಿಟಿ ಯ ಸ್ಟ್ರಾಟೆಜಿಕ್ ಲೀಡರ್ ಶಿಪ್ ಪ್ರೋಗ್ರಾಮ್ ಗೆ ಸುಳ್ಯದ ಪ್ರದೀಪ್ ಜೈನ್ ಬಲ್ನಾಡು ಪೇಟೆ ಆಯ್ಕೆ

Suddi Udaya
error: Content is protected !!