September 6, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

Suddi Udaya

ಫೆ.1: ಭೂಸೇನೆಯಲ್ಲಿ 22 ವರ್ಷ ದೇಶ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಎ.ಸಿ.ಪಿ ಹವಾಲ್ದಾರ್ ದೇವಕುಮಾರ್ ಗೌಡರಿಗೆ ಹುಟ್ಟೂರಿನಲ್ಲಿ ಸ್ವಾಗತ ಅಭಿನಂದನಾ ಕಾರ್ಯಕ್ರಮ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ನಿಂದ ಆರೋಗ್ಯ ರತ್ನ ಪ್ರಶಸ್ತಿ ಪ್ರದಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya
error: Content is protected !!