24.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು ಆಹ್ವಾನಿತ ಮಹಿಳೆಯರ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ”ದ ಪೂರ್ವಭಾವಿ ಸಭೆಯು ಡಿ.28 ರಂದು ವಿದ್ವತ್ ಪಿಯು ಕಾಲೇಜು, ಗುರುವಾಯನಕೆರೆಯಲ್ಲಿ ನಡೆಯಿತು.

ಸಭೆಯಲ್ಲಿ ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಕಾರ್ಯದರ್ಶಿ ರಾಕೇಶ್ ಹೆಗ್ಡೆ ಬಳಂಜ, ನಿಕಟಪೂರ್ವ ಕಾರ್ಯದರ್ಶಿ ಗುರುಪ್ರಕಾಶ್ ಭಟ್, ಜೊತೆ ಕಾರ್ಯದರ್ಶಿ ಶಂಕರ್ ರಾವ್, ನಿಕಟ ಪೂರ್ವ ಜೊತೆ ಕಾರ್ಯದರ್ಶಿ, ಇಮ್ರಾನ್ ಬೆಳ್ತಂಗಡಿ ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿ ಕಾಶೀನಾಥ್. ಕೆ, ಹಾಗೂ ಕಾರ್ಯದರ್ಶಿ ಪ್ರಜ್ವಲ್ ರೈ ಇವರು ಉಪಸ್ಥಿತರಿದ್ದರು.

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟವು ಜ. 4 ರಂದು ರಾತ್ರಿ ಗಂಟೆ 7.30 ಕ್ಕೆ ಪ್ರಾರಂಭಗೊಳ್ಳಲಿದ್ದು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಉದ್ಘಾಟಿಸಲಿದ್ದಾರೆ. ಮುಖ್ಯ ಅಥಿತಿಯಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ.ಕ್ರೀಡಾಂಗಣದ ಉದ್ಘಾಟನೆಯನ್ನು ತಹಶೀಲ್ದಾರರು
ಪೃಥ್ವಿ ಸಾನಿಕಂ ನಡೆಸಲಿರುವರು ಎಂದು ಬೆಳ್ತಂಗಡಿ ತಾಲೂಕು ವಾಲಿಬಾಲ್ ಅಸೋಸಿಯೇಷನ್ ನ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು ಇವರು ಪ್ರಕಟಣೆಯಲ್ಲಿ ತಿಳಿಸಿದರು.

ವಿದ್ವತ್ ಎಜುಕೇಶನ್ ಫೌಂಡೇಶನ್ ನ ಕೋಶಾಧಿಕಾರಿಯಾದ ಕಾಶೀನಾಥ್. ಕೆ ರವರು ಮಾತನಾಡಿ ತಾಲೂಕಿನ ಹಲವಾರು ಪ್ರತಿಷ್ಠಿತ ತಂಡಗಳು ಹಾಗೂ ಮಹಿಳೆಯರ ಆಹ್ವಾನಿತ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ನ ಜೊತೆ ಕಾರ್ಯದರ್ಶಿ ಶಂಕರ್ ರಾವ್ ರವರು ಮಾತನಾಡಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮುಖ್ಯ ಅಥಿತಿಗಳ ಬಗ್ಗೆ ಮಾಹಿತಿ ನೀಡಿ, ವಂದಿಸಿದರು.

Related posts

ದೇವಸ್ಥಾನದ ಅಭಿವೃದ್ದಿಗೆ ಪ್ರಸಾದಂ ಯೋಜನೆಯಡಿಯಲ್ಲಿ ಅನುದಾನ ಒದಗಿಸುವಂತೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪಿಯು ಕಾಲೇಜಿನಲ್ಲಿ ಪಾಳೇಗಾರಿಕೆ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಮುಂದಿರುವ ಸವಾಲುಗಳು ವಿಚಾರ ಸಂಕಿರಣ

Suddi Udaya

ಹರೀಶ್ ಪೂಂಜ ಬೃಹತ್ ಗೆಲುವು: ನಾರಾವಿಯಲ್ಲಿ ವಿಜಯೋತ್ಸವ

Suddi Udaya

ಶಿರ್ಲಾಲು ರಿಕ್ಷಾ ಮಾಲಕ -ಚಾಲಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಭಾರತೀಯ ಅಂಚೆ ಇಲಾಖೆ ಅಪಘಾತ ವಿಮೆ ನೋಂದಾವನಾ ಪ್ರಕ್ರಿಯೆ

Suddi Udaya
error: Content is protected !!