July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಡಿ.29ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Related posts

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya

ಬೈಕ್ ಅಪಘಾತ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಅಶೋಕ ಕುಮಾರ್ ನಿಧನ

Suddi Udaya

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪುಟ್ ಬಾಲ್ ಪಂದ್ಯಾಟದಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ಅರಣ್ಯದಲ್ಲಿ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಂಗಳೂರಿನಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!