23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ೨೮ನೇ ವರ್ಷದ ಪ್ರತಿಭಾ ಸಂಗಮವು ಡಿ.28ರಂದು ಅರಳಿಯ ರಂಗಮಂದಿರದಲ್ಲಿ ನಡೆಯಿತು.

ಕಡಬ ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸುರ್ಯ ಇವರು ಸಭೆಯನ್ನು ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಮಿತ್ರ ಯುವಕ ಮಂಡಲದ ಅಧ್ಯಕ್ಷ ಚರಣ್ ಕುಮಾರ್ ಪಿ. ವಹಿಸಿದ್ದರು.

ಆರ್ಯಭಟ ಪ್ರಶಸ್ತಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ್ ಕುಮಾರ್ ಲಾಯಿಲ ರವರನ್ನು ಸನ್ಮಾನಿಸಲಾಯಿತು.

ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ಬಹುಮಾನ ನೀಡಿ, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಊರಿನ ಪ್ರತಿಭೆಗಳನ್ನು ವೇದಿಕೆಯಲ್ಲಿ ಗುರುತಿಸಲಾಯಿತು.

ವೇದಿಕೆಯಲ್ಲಿ ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವೀಂದ್ರನಾಥ್ ಮತ್ತು ಯುವ ಸಂಕೀರ್ಣದ ಅಧ್ಯಕ್ಷ ಲಕ್ಷ್ಮಣ್ ಜಿ.ಎಸ್. ಎಳಚಿತ್ತಾಯನಗರ, ಮಿತ್ರ ಮಹಿಳಾ ಮಂಡಲದ ಅಧ್ಯಕ್ಷ ವತ್ಸಲಾ ಸಂತೋಷ್ ಗೌಡ ಉಪಸ್ಥಿತರಿದ್ದರು.

ವಿಜಯ್ ಕುಮಾರ್ ಕೊಡಿಯಲ್‌ಬೈಲ್ ನಿರ್ದೇಶನದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಂಡಿತು.
ಚೇತನ್ ಬಂಗೇರ ಸ್ವಾಗತಿಸಿ, ನಿಶಿತ್ ಬಂಗೇರ ಕಾರ್ಯಕ್ರಮ ನಿರೂಪಿಸಿ ಪಮಿತಾ ವಂದಿಸಿದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya
error: Content is protected !!