September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೊಡಿಬೈಲು ಶ್ರೀನಿವಾಸ ಶೆಣೈ ವಹಿಸಿದ್ದರು.

ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾಗಿ ಸುಧಾಕರ್ ಪ್ರಭು ಪೆರ್ಮರೋಡಿ ಇವರು ಆಯ್ಕೆಯಾದರು.

ಶ್ರೀನಿವಾಸ ಶೆಣೈ ಕೂಡಿಬೈಲು ಅವರು ತನ್ನ ಸೇವಾ ಅವಧಿಯಲ್ಲಿ ದುಡಿದ ಹಾಗೂ ಸಹಕಾರ ನೀಡಿದ ಎಲ್ಲರನ್ನು ಸ್ಮರಿಸಿ ಅಭಿನಂದಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿ ಸಂಘದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆಯ ಮಾತುಗಳನ್ನು ನುಡಿದರು.

ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಹಿರಿಯರು ಹಾಗೂ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.

Related posts

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಎಂ.ಎನ್. ರಾಜೇಂದ್ರ ಕುಮಾ‌ರ್ ರವರಿಗೆ ‘ಗ್ಲೋಬಲ್ ಅಚೀವರ್ಸ್‌’ ಪ್ರಶಸ್ತಿ

Suddi Udaya

ಭಾರೀ ಮಳೆಗೆ ಕಳೆಂಜ ಕುಕ್ಕಾಜೆಯಲ್ಲಿ ಮನೆಯ ಹಿಂಬದಿಯ ಗೋಡೆ ಕುಸಿತ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!