April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮವು ಡಿ.೨೯ರಂದು ನಡೆಯಿತು.

ಪರಮಪೂಜ್ಯ 108ಮುನಿಶ್ರೀ ಆದಿತ್ಯ ಸಾಗರ ಮಹಾರಾಜರು ಪಂಚಕಲ್ಯಾಣಗೊಂಡ 24 ತೀಥಂಕರರ ಜಿನ ಬಿಂಬಗಳನ್ನು ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಆಶೀರ್ವಾದ ಮೂಲಕ ಪವನ್ ಪಂಡಿತ್ ಹಾಗೂ ಶ್ರೀವೀರ ಇಂದ್ರರವರ ಮೂಲಕ ಜಿನಬಿಂಬಗಳಿಗೆ ಜಲ, ಗಂಧ, ಸಿಯಾಳ ಹಾಲು ಮುಂತಾದ ದ್ರವ್ಯಗಳಿಂದ ಶ್ರಾವಕ ಶ್ರಾವಕಿಯರು ಅಭಿಷೇಕದೊಂದಿಗೆ ಅರಿಹಂತ ಇಂದ್ರರು 24 ಜಿನ ಬಿಂಬಗಳನ್ನು ಗಂಧಕುಟಿಯಲ್ಲಿ ಪ್ರತಿಷ್ಠಾಪಿಸಿದರು.

ಈ ಸಂದರ್ಭದಲ್ಲಿ ತ್ರಿಲೋಕ ಚಿಹ್ನೆಯ ನಾಮಫಲಕವನ್ನು ದಾನಿಗಳಾದ ಧರ್ಮಸ್ಥಳ ಕನ್ಯಾಡಿ ಆದೀಶ ಲಾಡ್ಜ್‌ನ ಮಾಲಕ ಪದ್ಮಪ್ರಸಾದ್ ಜೈನ್ ಇವರು ಅನಾವರಣಗೊಳಿಸಿದರು.

ಶ್ರಾವಕಿಯರಿಂದ ಭಜನೆ, ಗ್ರೀಷ್ಮ ಇಜಿಲಾಂಪಾಡಿ ಅವರಿಂದ ಜಿನಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಜಗದ್ಗುರು ಪರಮಪೂಜ್ಯ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ನೀಡಿದ ಇಂದ್ರಧ್ವಜವನ್ನು ಪ್ರತಿಷ್ಠಾಪಿಸಲಾಯಿತು.

ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಪಣಿರಾಜ್ ಜೈನ್ ಕೊಕ್ಕಡ ಇವರು ಮಾಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಜಯ ಕುಮಾರ್ ಜೈನ್, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪಿ.ಎನ್. ರವಿರಾಜ್ ಬಂಗ, ಜಿನರಾಜ ಪೂವಣಿ, ರಾಜೇಂದ್ರ ಜೈನ್, ಫಣಿರಾಜ್ ಜೈನ್, ಸಂತೋಷ್ ಕುಮಾರ್, ವೀರೇಂದ್ರ ಕುಮಾರ್, ಅಭಿನಂದನ್ ಜೈನ್, ಅತೀಶಯ್ ಜೈನ್, ಜಿನೇಂದ್ರ ಕುಮಾರ್, ಗುಣಪಾಲ ಬಂಗ ಹಾಗೂ ಬಾರಿ ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.

ಪೂಜಾ ಕಾರ್ಯಕ್ರಮವನ್ನು ಪವನ್ ಪಂಡಿತ್, ವೀರಇಂದ್ರ ನೆರವೇರಿಸಿದರು. ಆಡಳಿತ ಮಂಡಳಿ ಸಂಚಾಲಕರಾದ ಡಾ. ಕೆ. ಜಯಕೀರ್ತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya
error: Content is protected !!