July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಇದರ ಉದ್ಘಾಟನಾ ಸಮಾರಂಭವು ಪೆರಿಂಜೆ ಪಜಂಬಾಡಿ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜರಗಿತು.

ಬೆಳ್ತಂಗಡಿ ತಾಲೂಕು ದಲಿತ ಮುಖಂಡ, ಉದ್ಯಮಿ ಲಕ್ಷ್ಮಣ್.ಜಿ.ಎಸ್. ಭೀಮ್ ಆರ್ಮಿ ಸಂಘಟನೆಯನ್ನು ಡಾ. ಬಿ. ಆರ್.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂ. ವಾದ)ಬೆಳ್ತಂಗಡಿ ತಾಲೂಕು ಸಮಿತಿ ಮುಖಂಡರು ಡಿ. ಓಬಯ್ಯಾ ವಿವಿಧ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಸುರೇಶ್. ಎಚ್. ಆರಂಬೋಡಿ, ಹಿರಿಯರಾದ ಸಿಂಗ ಮಲಯಾಳಪಲ್ಕೆ, ಬೂಬ ಬಡಕೋಡಿ, ರಮೇಶ್ ಪೇರಿ, ಭೀಮ್ ಆರ್ಮಿ ಹೊಸಂಗಡಿ ಇದರ ಅಧ್ಯಕ್ಷ ಗುರುಪ್ರಸಾದ್ ಪೆರಿಂಜೆ, ಕಾರ್ಯದರ್ಶಿ ಶರತ್, ಗೌರವ ಅಧ್ಯಕ್ಷ ರಘುನಾಥ, ಸಂಘಟನಾ ಪ್ರಧಾನ ಕಾರ್ಯದರ್ಶಿ ಸುನೀಲ್ ಪಜಂಬಾಡಿ,ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಪ್ರವೀಣ್ ಸೂರ್ಯ ಹೊಸಂಗಡಿ ಸ್ವಾಗತಿಸಿ, ವಂದಿಸಿದರು.

Related posts

ಮಂಗಳೂರಿನಲ್ಲಿ ನಡೆದ ಗುಂಪು ಹತ್ಯೆ ಪ್ರಕರಣ ಖಂಡನೀಯ : ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ ಟೀಂ ಸುಹಾಸ್ ಶೆಟ್ಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!