24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಕನ್ನಡ ವಿಭಾಗ ಹಾಗೂ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ (ರಿ.), ಕುಪ್ಪಳಿ ಸಹಯೋಗದಲ್ಲಿ ಕುವೆಂಪು ಅವರ 120ನೇ ಜನ್ಮದಿನೋತ್ಸವ ಪ್ರಯುಕ್ತ ವಿಶ್ವ ಮಾನವ ದಿನಾಚರಣೆಯನ್ನು ಡಿ.30ರಂದು ಉಜಿರೆ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು.

ಪ್ರಸಿದ್ಧ ಬರಹಗಾರರು ಹಾಗೂ ಸಿನಿಮಾ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ರವರು ಪ್ರಧಾನ ಉಪನ್ಯಾಸವನ್ನು ನೆರವೇರಿಸಿ ಮಾತನಾಡಿ, ಕವಿಗೆ ಪ್ರತಿಯೊಂದು ಸೂರ್ಯೋಧಯವು ಕೂಡ ಹೊಸತ್ತಾಗಿರುತ್ತದೆ. ಸಾಮಾಜಿಕ ಜಾಲತಾಣಗಳನ್ನು ಸಾಂಸ್ಕೃತಿಕ ಜಾಲತಾಣವನ್ನಾಗಿ ಪರಿವರ್ತಿಸಬೇಕು. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ಕೂಡ ಕುವೆಂಪು ರವರ ಕೃತಿಗಳನ್ನು ಓದುವುದು ಅವಶ್ಯ. ಹಾಗೂ ಓದುವುದರಿಂದ ಕಲ್ಪನಾ ಶಕ್ತಿ ಹೆಚ್ಚುತ್ತದೆ ಎಂದರು.

ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಪ್ರಧಾನ ಕಾರ್ಯಕ್ರಮದ ಬಳಿಕ ವಿಶೇಷ ಕಾರ್ಯಕ್ರಮವಾಗಿ ರಂಗ ನಿರ್ದೇಶಕ ಯಶವಂತ ಬೆಳ್ತಂಗಡಿ ನಿರ್ದೇಶಿಸಿರುವ ಎಸ್.ಡಿ.ಎಂ. ಕಲಾಕೇಂದ್ರದ ವಿದ್ಯಾರ್ಥಿಗಳಿಂದ ನಾಗಿ ಕಥನ ಕವನ ರೂಪಕ ಹಾಗೂ ಅರಿವಿನ ಹಾಡುಗಾರ ನಾದ ಮಣಿನಾಲ್ಕೂರು ರವರಿಂದ ಕುವೆಂಪು ಹಾಡುಗಳ ಗಾಯನ ನಡೆಯಿತು.

ಈ ಸಂದರ್ಭದಲ್ಲಿ ಡಾ|| ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ, ಶ್ರೀಮತಿ ಸೋನಿಯಾ ವರ್ಮಾ, ಉಪ ಪ್ರಾಂಶುಪಾಲ ಎಸ್.ಎನ್ ಕಾಕತ್ಕರ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಂ.ಪಿ ಶ್ರೀನಾಥ್, ಸಂಸ್ಕೃತ ವಿಭಾಗದ ಮುಖ್ಯಸ್ಥ ಶ್ರೀಧರ್ ಭಟ್, ಉಪನ್ಯಾಸಕಿ ಡಾ. ಶಲೀಫ್, ಸ್ನಾತಕೋತ್ತರ ಪದವಿ ಸಹಾಯಕ ಪ್ರಾಧ್ಯಾಪಕ ಪದ್ಮನಾಭ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ನಾಗಣ್ಣ ಡಿ.ಎ ನಿರೂಪಿಸಿದರು. ಕನ್ನಡ ಸಹ ಪ್ರಾಧ್ಯಾಪಕ ಡಾ. ರಾಜಶೇಖರ್ ಧನ್ಯವಾದವಿತ್ತರು.

Related posts

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ರವರಿಗೆ ಗೌರವ ಸಮರ್ಪಣೆ

Suddi Udaya

ಓಡಿಲ್ನಾಳ ಶ್ರೀ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 3ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ, ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!