25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಡಿ.29ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Related posts

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಉಜಿರೆ: ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹರೀಶ್ ಪೂಂಜ ಬೃಹತ್ ಬಹುಮತದಿಂದ ಗೆಲುವು: ಬಳಂಜ, ನಾಲ್ಕೂರು, ತೆಂಕಕಾರಂದೂರಿನಲ್ಲಿ ವಿಜಯೋತ್ಸವ

Suddi Udaya

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ಜನಸ್ಪಂದನ ಸಭೆ

Suddi Udaya
error: Content is protected !!