September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಡಿ.29ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Related posts

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಮಾಡ ಪ್ರೀಮಿಯರ್ ಲೀಗ್ – ಶಾರದಾಂಭ ಕ್ರಿಕೆಟರ್ಸ್ ಪ್ರಥಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಕರ್ನಾಟಕ ಮಿನಿ ಕ್ರೀಡಾಕೂಟ ಅಥ್ಲೆಟಿಕ್ಸ್ ಸ್ಪರ್ಧೆ : 100 ಮೀ. ಓಟದಲ್ಲಿ ಚಿನ್ನ ಗೆದ್ದ ಅದ್ವಿಕಾ ಕೆಪಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!