31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ೨೮ನೇ ವರ್ಷದ ಪ್ರತಿಭಾ ಸಂಗಮವು ಡಿ.28ರಂದು ಅರಳಿಯ ರಂಗಮಂದಿರದಲ್ಲಿ ನಡೆಯಿತು.

ಕಡಬ ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸುರ್ಯ ಇವರು ಸಭೆಯನ್ನು ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಮಿತ್ರ ಯುವಕ ಮಂಡಲದ ಅಧ್ಯಕ್ಷ ಚರಣ್ ಕುಮಾರ್ ಪಿ. ವಹಿಸಿದ್ದರು.

ಆರ್ಯಭಟ ಪ್ರಶಸ್ತಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ್ ಕುಮಾರ್ ಲಾಯಿಲ ರವರನ್ನು ಸನ್ಮಾನಿಸಲಾಯಿತು.

ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ಬಹುಮಾನ ನೀಡಿ, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಊರಿನ ಪ್ರತಿಭೆಗಳನ್ನು ವೇದಿಕೆಯಲ್ಲಿ ಗುರುತಿಸಲಾಯಿತು.

ವೇದಿಕೆಯಲ್ಲಿ ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವೀಂದ್ರನಾಥ್ ಮತ್ತು ಯುವ ಸಂಕೀರ್ಣದ ಅಧ್ಯಕ್ಷ ಲಕ್ಷ್ಮಣ್ ಜಿ.ಎಸ್. ಎಳಚಿತ್ತಾಯನಗರ, ಮಿತ್ರ ಮಹಿಳಾ ಮಂಡಲದ ಅಧ್ಯಕ್ಷ ವತ್ಸಲಾ ಸಂತೋಷ್ ಗೌಡ ಉಪಸ್ಥಿತರಿದ್ದರು.

ವಿಜಯ್ ಕುಮಾರ್ ಕೊಡಿಯಲ್‌ಬೈಲ್ ನಿರ್ದೇಶನದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಂಡಿತು.
ಚೇತನ್ ಬಂಗೇರ ಸ್ವಾಗತಿಸಿ, ನಿಶಿತ್ ಬಂಗೇರ ಕಾರ್ಯಕ್ರಮ ನಿರೂಪಿಸಿ ಪಮಿತಾ ವಂದಿಸಿದರು.

Related posts

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ : ಲೆಕ್ಕಪತ್ರ ಮಂಡನೆ, ಸ್ಮರಣಸಂಚಿಕೆ ಬಿಡುಗಡೆ

Suddi Udaya

ಗುರುವಾಯನಕೆರೆ ಯರ್ಡೂರು ರಾಮನಗರದ ಮನೆಯೊಂದಕ್ಕೆಹಾಡುಹಗಲೇ ನುಗ್ಗಿದ ಕಳ್ಳರು: ರೂ.15 ಸಾವಿರ ನಗದು, 50 ಸಾವಿರ ಮೌಲ್ಯದ ಚಿನ್ನದ ಸರ ಕಳವು

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya
error: Content is protected !!