23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ೨೮ನೇ ವರ್ಷದ ಪ್ರತಿಭಾ ಸಂಗಮವು ಡಿ.28ರಂದು ಅರಳಿಯ ರಂಗಮಂದಿರದಲ್ಲಿ ನಡೆಯಿತು.

ಕಡಬ ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸುರ್ಯ ಇವರು ಸಭೆಯನ್ನು ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಮಿತ್ರ ಯುವಕ ಮಂಡಲದ ಅಧ್ಯಕ್ಷ ಚರಣ್ ಕುಮಾರ್ ಪಿ. ವಹಿಸಿದ್ದರು.

ಆರ್ಯಭಟ ಪ್ರಶಸ್ತಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ್ ಕುಮಾರ್ ಲಾಯಿಲ ರವರನ್ನು ಸನ್ಮಾನಿಸಲಾಯಿತು.

ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ಬಹುಮಾನ ನೀಡಿ, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಊರಿನ ಪ್ರತಿಭೆಗಳನ್ನು ವೇದಿಕೆಯಲ್ಲಿ ಗುರುತಿಸಲಾಯಿತು.

ವೇದಿಕೆಯಲ್ಲಿ ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವೀಂದ್ರನಾಥ್ ಮತ್ತು ಯುವ ಸಂಕೀರ್ಣದ ಅಧ್ಯಕ್ಷ ಲಕ್ಷ್ಮಣ್ ಜಿ.ಎಸ್. ಎಳಚಿತ್ತಾಯನಗರ, ಮಿತ್ರ ಮಹಿಳಾ ಮಂಡಲದ ಅಧ್ಯಕ್ಷ ವತ್ಸಲಾ ಸಂತೋಷ್ ಗೌಡ ಉಪಸ್ಥಿತರಿದ್ದರು.

ವಿಜಯ್ ಕುಮಾರ್ ಕೊಡಿಯಲ್‌ಬೈಲ್ ನಿರ್ದೇಶನದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಂಡಿತು.
ಚೇತನ್ ಬಂಗೇರ ಸ್ವಾಗತಿಸಿ, ನಿಶಿತ್ ಬಂಗೇರ ಕಾರ್ಯಕ್ರಮ ನಿರೂಪಿಸಿ ಪಮಿತಾ ವಂದಿಸಿದರು.

Related posts

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya
error: Content is protected !!