July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ೨೮ನೇ ವರ್ಷದ ಪ್ರತಿಭಾ ಸಂಗಮವು ಡಿ.28ರಂದು ಅರಳಿಯ ರಂಗಮಂದಿರದಲ್ಲಿ ನಡೆಯಿತು.

ಕಡಬ ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸುರ್ಯ ಇವರು ಸಭೆಯನ್ನು ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಮಿತ್ರ ಯುವಕ ಮಂಡಲದ ಅಧ್ಯಕ್ಷ ಚರಣ್ ಕುಮಾರ್ ಪಿ. ವಹಿಸಿದ್ದರು.

ಆರ್ಯಭಟ ಪ್ರಶಸ್ತಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ್ ಕುಮಾರ್ ಲಾಯಿಲ ರವರನ್ನು ಸನ್ಮಾನಿಸಲಾಯಿತು.

ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ಬಹುಮಾನ ನೀಡಿ, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಊರಿನ ಪ್ರತಿಭೆಗಳನ್ನು ವೇದಿಕೆಯಲ್ಲಿ ಗುರುತಿಸಲಾಯಿತು.

ವೇದಿಕೆಯಲ್ಲಿ ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವೀಂದ್ರನಾಥ್ ಮತ್ತು ಯುವ ಸಂಕೀರ್ಣದ ಅಧ್ಯಕ್ಷ ಲಕ್ಷ್ಮಣ್ ಜಿ.ಎಸ್. ಎಳಚಿತ್ತಾಯನಗರ, ಮಿತ್ರ ಮಹಿಳಾ ಮಂಡಲದ ಅಧ್ಯಕ್ಷ ವತ್ಸಲಾ ಸಂತೋಷ್ ಗೌಡ ಉಪಸ್ಥಿತರಿದ್ದರು.

ವಿಜಯ್ ಕುಮಾರ್ ಕೊಡಿಯಲ್‌ಬೈಲ್ ನಿರ್ದೇಶನದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಂಡಿತು.
ಚೇತನ್ ಬಂಗೇರ ಸ್ವಾಗತಿಸಿ, ನಿಶಿತ್ ಬಂಗೇರ ಕಾರ್ಯಕ್ರಮ ನಿರೂಪಿಸಿ ಪಮಿತಾ ವಂದಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!