September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.29ರಂದು ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಆವಿರೋಧವಾಗಿ ಆಯ್ಕೆಯಾದರೆ, ಉಳಿದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹೆಚ್. ಪದ್ಮಗೌಡ ಅವರ ನೇತೃತ್ವದ ತಂಡ ಜಯಭೇರಿ ಬಾರಿಸಿದ್ದಾರೆ.

ಡಿ.29ರಂದು ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಹೆಚ್. ಪದ್ಮ ಗೌಡ ಹೆಚ್. (840 ಮತ ), ರಾಜಪ್ಪ ಗೌಡ ಯಾನೆ ಸೀತಾರಾಮ ಗೌಡ(800 ಮತ ), ದಾಮೋದರ ಗೌಡ ಸುರುಳಿ (793 ಮತ), ರಮೇಶ ಗೌಡ(785 ಮತ ), ಸುರೇಂದ್ರ(784 ಮತ), ಪ್ರವೀಣ್ ವಿಜಯ್(781 ಮತ ) ಮತಗಳನ್ನು ಪಡೆದು ಜಯಭೇರಿ ಭಾರಿಸಿದ್ದಾರೆ.

ಅವಿರೋಧವಾಗಿ ಆಯ್ಕೆ: ಇನ್ನು ಉಳಿದಂತೆ ಪ.ಜಾತಿ ಕ್ಷೇತ್ರದಿಂದ ಚೀಂಕ್ರ, ಪ.ಪಂಗಡ ಕ್ಷೇತ್ರದಿಂದ ಸೀತಾರಾಮ ಬಿ.ಎಸ್., ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ದಿನೇಶ್ ಎ., ಹಿಂದುಳಿದ ಬಿ ಪ್ರವರ್ಗ ಕ್ಷೇತ್ರದಿಂದ ಶೀನಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಸುಕನ್ಯ ಮತ್ತು ಹೇಮಾವತಿ ಇವರುಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಮಾನ್ಸೂನ್ ಸೇಲ್ : ಪ್ರತೀ ಖರೀದಿಯ ಮೇಲೆ ಶೇ.25 ರಷ್ಟು ಡಿಸ್ಕೌಂಟ್

Suddi Udaya

ಲಾಯಿಲದಲ್ಲಿ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ಕಾಳಿಕಾಂಬಾ, ವರಮಹಾಲಕ್ಷ್ಮೀ ಪೂಜೆ: ಬೆಸ್ಟ್ ಎಂಎಲ್ಎ ಪ್ರಶಸ್ತಿ ಪಡೆದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಪ್ರಕರಣ:ಸೌಜನ್ಯ ಮಾವ ವಿಠ್ಠಲ ಗೌಡನಿಗೆ ನ್ಯಾಯಾಂಗ ಬಂಧನಕ್ಕೆ ಆದೇಶ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಹೊಸಂಗಡಿ ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುನೀಲ್ ಶೆಟ್ಟಿಯವರಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!