22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.29ರಂದು ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಆವಿರೋಧವಾಗಿ ಆಯ್ಕೆಯಾದರೆ, ಉಳಿದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹೆಚ್. ಪದ್ಮಗೌಡ ಅವರ ನೇತೃತ್ವದ ತಂಡ ಜಯಭೇರಿ ಬಾರಿಸಿದ್ದಾರೆ.

ಡಿ.29ರಂದು ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಹೆಚ್. ಪದ್ಮ ಗೌಡ ಹೆಚ್. (840 ಮತ ), ರಾಜಪ್ಪ ಗೌಡ ಯಾನೆ ಸೀತಾರಾಮ ಗೌಡ(800 ಮತ ), ದಾಮೋದರ ಗೌಡ ಸುರುಳಿ (793 ಮತ), ರಮೇಶ ಗೌಡ(785 ಮತ ), ಸುರೇಂದ್ರ(784 ಮತ), ಪ್ರವೀಣ್ ವಿಜಯ್(781 ಮತ ) ಮತಗಳನ್ನು ಪಡೆದು ಜಯಭೇರಿ ಭಾರಿಸಿದ್ದಾರೆ.

ಅವಿರೋಧವಾಗಿ ಆಯ್ಕೆ: ಇನ್ನು ಉಳಿದಂತೆ ಪ.ಜಾತಿ ಕ್ಷೇತ್ರದಿಂದ ಚೀಂಕ್ರ, ಪ.ಪಂಗಡ ಕ್ಷೇತ್ರದಿಂದ ಸೀತಾರಾಮ ಬಿ.ಎಸ್., ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ದಿನೇಶ್ ಎ., ಹಿಂದುಳಿದ ಬಿ ಪ್ರವರ್ಗ ಕ್ಷೇತ್ರದಿಂದ ಶೀನಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಸುಕನ್ಯ ಮತ್ತು ಹೇಮಾವತಿ ಇವರುಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಬೆಳಾಲು: ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ; ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!