22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

ಶಿಶಿಲ: ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ ೨೯ನೇ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಡಿ.೨೮ರಂದು ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡ ವೈಕುಂಠಪುರದಲ್ಲಿ ನಡೆಯಿತು.

ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಇದರ ಅಧ್ಯಕ್ಷೆ ಶ್ರೀಮತಿ ಶಾಂತ ಪಿ. ಶೆಟ್ಟಿ ಶಿಶಿಲ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ ವಿಷಯ ಎಂದು ಶುಭಹಾರೈಸಿದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ-ಉದ್ಯೋಗದ ಅವಕಾಶವಿರುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯೆ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.
ಸಂಸ್ಥೆಯ ಪರವಾಗಿ ಶ್ರೀಮತಿ ವಿನಯ ಶೆಂಡ್ಯೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಿಶಿಲ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ಟ್ರಸ್ಟಿ ಶ್ರೀಮತಿ ಚಂದ್ರಾವತಿ, ಶಿಶಿಲ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರದ ಮಾಜಿ ಅಧ್ಯಕ್ಷ ಚೆನ್ನಪ್ಪ ಕೆ.ಎಂ. ಉಪಸ್ಥಿತರಿದ್ದರು. ಒಟ್ಟು ೨೫ ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ಆರಂಬೋಡಿ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya
error: Content is protected !!