23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

ಶಿಶಿಲ: ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ ೨೯ನೇ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಡಿ.೨೮ರಂದು ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ಕಟ್ಟಡ ವೈಕುಂಠಪುರದಲ್ಲಿ ನಡೆಯಿತು.

ಕನ್ಯಾಡಿ ಶ್ರೀ ದುರ್ಗಾಮಾತೃ ಮಂಡಳಿ ಇದರ ಅಧ್ಯಕ್ಷೆ ಶ್ರೀಮತಿ ಶಾಂತ ಪಿ. ಶೆಟ್ಟಿ ಶಿಶಿಲ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ ವಿಷಯ ಎಂದು ಶುಭಹಾರೈಸಿದರು.

ಸೇವಾಭಾರತಿ ಕನ್ಯಾಡಿಯ ಅಧ್ಯಕ್ಷೆ ಹಾಗೂ ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘ ಇದರ ಸಿಇಒ ಶ್ರೀಮತಿ ಸ್ವರ್ಣಗೌರಿ ಟೈಲರಿಂಗ್ ಕಲಿಯುವುದರಿಂದ ಬೇರೆ ಬೇರೆ ರೀತಿಯ ಸ್ವ-ಉದ್ಯೋಗದ ಅವಕಾಶವಿರುತ್ತದೆ. ಪ್ರಸ್ತುತ ಕಾಲಘಟ್ಟದಲ್ಲಿ ಮಹಿಳೆಯರು ಯಾರಿಗೂ ಅವಲಂಬಿತವಾಗದೆ ಸ್ವಾವಲಂಬಿ ಜೀವನವನ್ನು ನಡೆಸುವುದು ಅತ್ಯಗತ್ಯವೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಟೈಲರಿಂಗ್ ತರಬೇತುದಾರರಾದ ಶ್ರೀಮತಿ ವಿನಯ ಶೆಂಡ್ಯೆ ಶುಭಹಾರೈಸಿ ಸಂತಸ ವ್ಯಕ್ತಪಡಿಸಿದರು.
ಸಂಸ್ಥೆಯ ಪರವಾಗಿ ಶ್ರೀಮತಿ ವಿನಯ ಶೆಂಡ್ಯೆಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

ವೇದಿಕೆಯಲ್ಲಿ ಶಿಶಿಲ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದ ಟ್ರಸ್ಟಿ ಶ್ರೀಮತಿ ಚಂದ್ರಾವತಿ, ಶಿಶಿಲ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರದ ಮಾಜಿ ಅಧ್ಯಕ್ಷ ಚೆನ್ನಪ್ಪ ಕೆ.ಎಂ. ಉಪಸ್ಥಿತರಿದ್ದರು. ಒಟ್ಟು ೨೫ ಮಂದಿ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಉಪ ನಿರೀಕ್ಷಕರಾಗಿ ಭಡ್ತಿಗೊಂಡ ದೇವಪ್ಪ ಎಂ ಉಪ್ಪಿನಂಗಡಿ ಠಾಣಾ ಸಂಚಾರಿ ವಿಭಾಗದಲ್ಲಿ ಅಧಿಕಾರ ಸ್ವೀಕಾರ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಸಾಧನ ಪ್ರಶಸ್ತಿ

Suddi Udaya

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya
error: Content is protected !!