23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮವು ಡಿ.೨೯ರಂದು ನಡೆಯಿತು.

ಪರಮಪೂಜ್ಯ 108ಮುನಿಶ್ರೀ ಆದಿತ್ಯ ಸಾಗರ ಮಹಾರಾಜರು ಪಂಚಕಲ್ಯಾಣಗೊಂಡ 24 ತೀಥಂಕರರ ಜಿನ ಬಿಂಬಗಳನ್ನು ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಆಶೀರ್ವಾದ ಮೂಲಕ ಪವನ್ ಪಂಡಿತ್ ಹಾಗೂ ಶ್ರೀವೀರ ಇಂದ್ರರವರ ಮೂಲಕ ಜಿನಬಿಂಬಗಳಿಗೆ ಜಲ, ಗಂಧ, ಸಿಯಾಳ ಹಾಲು ಮುಂತಾದ ದ್ರವ್ಯಗಳಿಂದ ಶ್ರಾವಕ ಶ್ರಾವಕಿಯರು ಅಭಿಷೇಕದೊಂದಿಗೆ ಅರಿಹಂತ ಇಂದ್ರರು 24 ಜಿನ ಬಿಂಬಗಳನ್ನು ಗಂಧಕುಟಿಯಲ್ಲಿ ಪ್ರತಿಷ್ಠಾಪಿಸಿದರು.

ಈ ಸಂದರ್ಭದಲ್ಲಿ ತ್ರಿಲೋಕ ಚಿಹ್ನೆಯ ನಾಮಫಲಕವನ್ನು ದಾನಿಗಳಾದ ಧರ್ಮಸ್ಥಳ ಕನ್ಯಾಡಿ ಆದೀಶ ಲಾಡ್ಜ್‌ನ ಮಾಲಕ ಪದ್ಮಪ್ರಸಾದ್ ಜೈನ್ ಇವರು ಅನಾವರಣಗೊಳಿಸಿದರು.

ಶ್ರಾವಕಿಯರಿಂದ ಭಜನೆ, ಗ್ರೀಷ್ಮ ಇಜಿಲಾಂಪಾಡಿ ಅವರಿಂದ ಜಿನಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಜಗದ್ಗುರು ಪರಮಪೂಜ್ಯ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ನೀಡಿದ ಇಂದ್ರಧ್ವಜವನ್ನು ಪ್ರತಿಷ್ಠಾಪಿಸಲಾಯಿತು.

ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಪಣಿರಾಜ್ ಜೈನ್ ಕೊಕ್ಕಡ ಇವರು ಮಾಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಜಯ ಕುಮಾರ್ ಜೈನ್, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪಿ.ಎನ್. ರವಿರಾಜ್ ಬಂಗ, ಜಿನರಾಜ ಪೂವಣಿ, ರಾಜೇಂದ್ರ ಜೈನ್, ಫಣಿರಾಜ್ ಜೈನ್, ಸಂತೋಷ್ ಕುಮಾರ್, ವೀರೇಂದ್ರ ಕುಮಾರ್, ಅಭಿನಂದನ್ ಜೈನ್, ಅತೀಶಯ್ ಜೈನ್, ಜಿನೇಂದ್ರ ಕುಮಾರ್, ಗುಣಪಾಲ ಬಂಗ ಹಾಗೂ ಬಾರಿ ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.

ಪೂಜಾ ಕಾರ್ಯಕ್ರಮವನ್ನು ಪವನ್ ಪಂಡಿತ್, ವೀರಇಂದ್ರ ನೆರವೇರಿಸಿದರು. ಆಡಳಿತ ಮಂಡಳಿ ಸಂಚಾಲಕರಾದ ಡಾ. ಕೆ. ಜಯಕೀರ್ತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕುಣಿತ ಭಜನಾ ತರಬೇತುದಾರರಾದ ವಿ ಹರೀಶ್ ನೆರಿಯ ರವರಿಗೆ ಗೌರವದ ಸನ್ಮಾನ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಗೆ ರಾಜ್ಯಮಟ್ಟದ ಪ್ರಾಜೆಕ್ಟ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya
error: Content is protected !!