September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

ಬೆಳ್ತಂಗಡಿ: ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿಯ ಮೊದಲನೇ ಸಭೆಯನ್ನು ಡಿ.೨೯ರಂದು ಕೊಡ್ಯೇಲು ಸಂಜೀವ ಶೆಟ್ಟಿಯವರ ಹಾಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷ ನೋಣಯ್ಯ ಶೆಟ್ಟಿ ಕೊಡ್ಯೇಲು ವಹಿಸಿದ್ದರು.

ಸಭೆಯಲ್ಲಿ ವಲಯ ಬಂಟರ ಸಂಘದ ಸಂಚಾಲಕ ರಮೇಶ್ ಶೆಟ್ಟಿ ಪೆರಿಂಜೆ, ವೇಣೂರು ವಲಯ ಬಂಟರ ಸಂಘದ ಕಾರ್ಯದರ್ಶಿ ಸಂದೀಪ್ ಶೆಟ್ಟಿ ಕುಂಡಾಜೆ ಉಪಸ್ಥಿತರಿದ್ದರು.

ಮುಂದಿನ 2 ವರ್ಷದ ಅವಧಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಆಯ್ಕೆಯನ್ನು ಸರ್ವಾನುಮತದಿಂದ ಮಾಡಲಾಯಿತು. ಗ್ರಾಮದ ವಿವಿಧ ಗ್ರಾಮಗಳಿಗೆ ಜವಾಬ್ದಾರಿ ಸದಸ್ಯರುಗಳ ನೇಮಕವನ್ನು ಮಾಡಲಾಯಿತು.
ಅಧ್ಯಕ್ಷರಾಗಿ ರತ್ನಾಕರ ಶೆಟ್ಟಿ ಹೊಕ್ಕಾಡಿಗೋಳಿ, ಕಾರ್ಯದರ್ಶಿಯಾಗಿ ಶಿವರಾಜ್ ಶೆಟ್ಟಿ ಅಜ್ಜಾಡಿ, ಜೊತೆ ಕಾರ್ಯದರ್ಶಿಯಾಘಿ ಶಶಿಧರ ಶೆಟ್ಟಿ ಹಕ್ಕೇರಿ, ಕೋಶಾಧಿಕಾರಿಯಾಗಿ ಸತೀಶ್ ಶೆಟ್ಟಿ ಕುಂಜಾಡಿ, ಉಪಾಧ್ಯಕ್ಷರುಗಳಾಗಿ ವಿಶ್ವನಾಥ ಶೆಟ್ಟಿ ಐತ್ತೇರಿ, ರಾಧಾಕೃಷ್ಣ ಶೆಟ್ಟಿ ಉಗ್ರೋಡಿ, ಶ್ರೀಮತಿ ಯಶೋಧ ಚಂದ್ರಶೇಖರ ಶೆಟ್ಟಿ ಪೂವಳ, ಗೌರವ ಸಲಹೆಗಾರರಾಗಿ ನೋಣಯ್ಯ ಶೆಟ್ಟಿ ಕೊಡ್ಯೇಲು, ರಮೇಶ್ ಎಂ. ಶೆಟ್ಟಿ ಉಗ್ರೋಡಿ, ಸಂದೀಪ್ ಶೆಟ್ಟಿ ಉಮನೊಟ್ಟು, ಜವಾಬ್ದಾರಿಯುತ ಸದಸ್ಯರುಗಳಾಗಿ ಕುಂಜಾಡಿ: ಹರೀಶ್ ಜೆ. ಶೆಟ್ಟಿ ಕುಂಜಾಡಿ, ಪೂಂಜ: ಸದಾಶಿವ ಶೆಟ್ಟಿ ಅಸನಬೆಟ್ಟು, ರವಿಪ್ರಸಾದ್ ಶೆಟ್ಟಿ, ಪಿಲಿಕಜೆ: ಶರತ್ ಶೆಟ್ಟಿ, ಧೀರಾಜ್ ಶೆಟ್ಟಿ, ಆರ್ಥಿಕ್ ಶೆಟ್ಟಿ, ಪಾಲ್ಯ: ಉಮೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ಹಕ್ಕೇರಿ: ಸಚಿನ್ ಕೆ. ಶೆಟ್ಟಿ, ಶ್ರೀನಿಧಿ ಶೆಟ್ಟಿ, ಒಳಬೈಲು: ಬಾಲಕೃಷ್ಣ ಶೆಟ್ಟಿ, ವಿಜಯ ಶೆಟ್ಟಿ ಬರಾಯಿ, ಪೂವಳ: ಸಂದೀಪ್ ಶೆಟ್ಟಿ ಕುಂಡಾಜೆ, ಚಂದ್ರಶೇಖರ ಶೆಟ್ಟಿ, ಹೆನ್ನಿಮಾರ್: ಸುಜಿತ್ ಶೆಟ್ಟಿ, ರತನ್ ಶೆಟ್ಟಿ ಉಗ್ರೋಡಿ: ಪುಷ್ಪರಾಜ್ ಶೆಟ್ಟಿ ಇವರುಗಳು ಆಯ್ಕೆಯಾದರು.

Related posts

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಬಳಂಜ ಬೋಂಟ್ರೊಟ್ಟುಗುತ್ತು ದೈವಸ್ಥಾನಕ್ಕೆ ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ವಿಧಾನಪರಿಷತ್ ಶಾಸಕ ಕೆ.ಪ್ರತಾಪ ಸಿಂಹ ನಾಯಕರಿಂದ ಉಗ್ರಾಣದ ಉದ್ಘಾಟನೆ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya
error: Content is protected !!