25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಡಿ.29ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Related posts

ಮುಂಡಾಜೆ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಾ.8, ಗುರುವಾಯನಕೆರೆ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ದೈವರಾಜ ಗುಳಿಗ ನೇಮೋತ್ಸವ

Suddi Udaya

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya

ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ: ಇಂದಿರಾ ಗಾಂಧಿ ವಸತಿ ಶಾಲೆ, ಹೊಸಂಗಡಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!