September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಡಿ.29ರಂದು ನೆರವೇರಿಸಿದರು.

ಈ ಸಂದರ್ಭದಲ್ಲಿ ಕೃತಿಕರ್ತ ಡಾ.ಸುಬ್ರಹ್ಮಣ್ಯ ಭಟ್, ಅವರ ಪತ್ನಿ ಭವ್ಯ ಜಿ.ಜಿ. ಹಾಗೂ ಮಕ್ಕಳಾದ ಅಭಿಗಮ್ಯ ರಾಮ್ ಮತ್ತು ಆಶ್ಮನ್ ಕೃಷ್ಣ ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಭಟ್ಟರ ಎರಡನೇ ಕಥಾ ಸಂಕಲನ ಇದಾಗಿದ್ದು ಸುಧಾ ವಾರಪತ್ರಿಕೆಯ ಮುಖ್ಯ ಉಪಸಂಪಾದಕಿ ಉಮಾ ಅನಂತ್ ಅವರು ಇದಕ್ಕೆ ಮುನ್ನುಡಿ ಬರೆದಿದ್ದು, ಖ್ಯಾತ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿಯವರು ಶುಭನುಡಿಗಳನ್ನು ಬರೆದಿರುತ್ತಾರೆ. ಮಲೆನಾಡು ಪ್ರಕಾಶನ ಚಿಕ್ಕಮಗಳೂರು ಇದನ್ನು ಪ್ರಕಟಿಸಿದ್ದು ಪ್ರತಿಗಳಿಗಾಗಿ ಲೇಖಕರನ್ನು 9448951856 ರಲ್ಲಿ ವಾಟ್ಸಪ್ ಮೂಲಕ ಸಂಪರ್ಕಿಸಬಹುದಾಗಿದೆ.

Related posts

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಿ.ಯದುಪತಿ ಗೌಡರಿಗೆ ಗೌರವಾರ್ಪಣೆ

Suddi Udaya
error: Content is protected !!