22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೊಡಿಬೈಲು ಶ್ರೀನಿವಾಸ ಶೆಣೈ ವಹಿಸಿದ್ದರು.

ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾಗಿ ಸುಧಾಕರ್ ಪ್ರಭು ಪೆರ್ಮರೋಡಿ ಇವರು ಆಯ್ಕೆಯಾದರು.

ಶ್ರೀನಿವಾಸ ಶೆಣೈ ಕೂಡಿಬೈಲು ಅವರು ತನ್ನ ಸೇವಾ ಅವಧಿಯಲ್ಲಿ ದುಡಿದ ಹಾಗೂ ಸಹಕಾರ ನೀಡಿದ ಎಲ್ಲರನ್ನು ಸ್ಮರಿಸಿ ಅಭಿನಂದಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿ ಸಂಘದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆಯ ಮಾತುಗಳನ್ನು ನುಡಿದರು.

ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಹಿರಿಯರು ಹಾಗೂ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.

Related posts

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!