23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕೊಡಿಬೈಲು ಶ್ರೀನಿವಾಸ ಶೆಣೈ ವಹಿಸಿದ್ದರು.

ಜಿಲ್ಲಾ ಸಂಘದ ನೂತನ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾಗಿ ಸುಧಾಕರ್ ಪ್ರಭು ಪೆರ್ಮರೋಡಿ ಇವರು ಆಯ್ಕೆಯಾದರು.

ಶ್ರೀನಿವಾಸ ಶೆಣೈ ಕೂಡಿಬೈಲು ಅವರು ತನ್ನ ಸೇವಾ ಅವಧಿಯಲ್ಲಿ ದುಡಿದ ಹಾಗೂ ಸಹಕಾರ ನೀಡಿದ ಎಲ್ಲರನ್ನು ಸ್ಮರಿಸಿ ಅಭಿನಂದಿಸಿ ಕೃತಜ್ಞತೆಗಳನ್ನು ಸಲ್ಲಿಸಿದರು ಹಾಗೂ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಆಡಳಿತ ಮಂಡಳಿಯವರನ್ನು ಅಭಿನಂದಿಸಿ ಸಂಘದ ಎಲ್ಲ ಕಾರ್ಯ ಚಟುವಟಿಕೆಗಳಿಗೆ ಸಂಪೂರ್ಣ ಸಹಕಾರವನ್ನು ನೀಡುತ್ತೇನೆ ಎಂದು ಭರವಸೆಯ ಮಾತುಗಳನ್ನು ನುಡಿದರು.

ಈ ಸಂದರ್ಭದಲ್ಲಿ ಸಮಾಜದ ಗಣ್ಯರು, ಹಿರಿಯರು ಹಾಗೂ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದರು.

Related posts

ನೆರಿಯ: ಸಂಜೀವ ಗೌಡ ನಿಧನ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಪತ್ತೇದಾರಿ ಕಾದಂಬರಿ ” ವಿಷ ವರ್ತುಲ” ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!