September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.29ರಂದು ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಆವಿರೋಧವಾಗಿ ಆಯ್ಕೆಯಾದರೆ, ಉಳಿದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಹೆಚ್. ಪದ್ಮಗೌಡ ಅವರ ನೇತೃತ್ವದ ತಂಡ ಜಯಭೇರಿ ಬಾರಿಸಿದ್ದಾರೆ.

ಡಿ.29ರಂದು ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಹಾಲಿ ಅಧ್ಯಕ್ಷ ಹೆಚ್. ಪದ್ಮ ಗೌಡ ಹೆಚ್. (840 ಮತ ), ರಾಜಪ್ಪ ಗೌಡ ಯಾನೆ ಸೀತಾರಾಮ ಗೌಡ(800 ಮತ ), ದಾಮೋದರ ಗೌಡ ಸುರುಳಿ (793 ಮತ), ರಮೇಶ ಗೌಡ(785 ಮತ ), ಸುರೇಂದ್ರ(784 ಮತ), ಪ್ರವೀಣ್ ವಿಜಯ್(781 ಮತ ) ಮತಗಳನ್ನು ಪಡೆದು ಜಯಭೇರಿ ಭಾರಿಸಿದ್ದಾರೆ.

ಅವಿರೋಧವಾಗಿ ಆಯ್ಕೆ: ಇನ್ನು ಉಳಿದಂತೆ ಪ.ಜಾತಿ ಕ್ಷೇತ್ರದಿಂದ ಚೀಂಕ್ರ, ಪ.ಪಂಗಡ ಕ್ಷೇತ್ರದಿಂದ ಸೀತಾರಾಮ ಬಿ.ಎಸ್., ಹಿಂದುಳಿದ ಎ ಪ್ರವರ್ಗ ಕ್ಷೇತ್ರದಿಂದ ದಿನೇಶ್ ಎ., ಹಿಂದುಳಿದ ಬಿ ಪ್ರವರ್ಗ ಕ್ಷೇತ್ರದಿಂದ ಶೀನಪ್ಪ ಗೌಡ, ಮಹಿಳಾ ಮೀಸಲು ಕ್ಷೇತ್ರದಿಂದ ಸುಕನ್ಯ ಮತ್ತು ಹೇಮಾವತಿ ಇವರುಗಳು ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಚುನಾವಣಾ ಪ್ರಕ್ರಿಯೆಯನ್ನು ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ವಿ. ಪ್ರತಿಮಾ ನಡೆಸಿಕೊಟ್ಟರು.

Related posts

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ “ಆಟಿಡೊಂಜಿ ದಿನ” ಸ್ನೇಹಭೋಜನ ಕೂಟ

Suddi Udaya

ಪಟ್ರಮೆ ಮೊಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!