22.7 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮವು ಡಿ.೨೯ರಂದು ನಡೆಯಿತು.

ಪರಮಪೂಜ್ಯ 108ಮುನಿಶ್ರೀ ಆದಿತ್ಯ ಸಾಗರ ಮಹಾರಾಜರು ಪಂಚಕಲ್ಯಾಣಗೊಂಡ 24 ತೀಥಂಕರರ ಜಿನ ಬಿಂಬಗಳನ್ನು ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಆಶೀರ್ವಾದ ಮೂಲಕ ಪವನ್ ಪಂಡಿತ್ ಹಾಗೂ ಶ್ರೀವೀರ ಇಂದ್ರರವರ ಮೂಲಕ ಜಿನಬಿಂಬಗಳಿಗೆ ಜಲ, ಗಂಧ, ಸಿಯಾಳ ಹಾಲು ಮುಂತಾದ ದ್ರವ್ಯಗಳಿಂದ ಶ್ರಾವಕ ಶ್ರಾವಕಿಯರು ಅಭಿಷೇಕದೊಂದಿಗೆ ಅರಿಹಂತ ಇಂದ್ರರು 24 ಜಿನ ಬಿಂಬಗಳನ್ನು ಗಂಧಕುಟಿಯಲ್ಲಿ ಪ್ರತಿಷ್ಠಾಪಿಸಿದರು.

ಈ ಸಂದರ್ಭದಲ್ಲಿ ತ್ರಿಲೋಕ ಚಿಹ್ನೆಯ ನಾಮಫಲಕವನ್ನು ದಾನಿಗಳಾದ ಧರ್ಮಸ್ಥಳ ಕನ್ಯಾಡಿ ಆದೀಶ ಲಾಡ್ಜ್‌ನ ಮಾಲಕ ಪದ್ಮಪ್ರಸಾದ್ ಜೈನ್ ಇವರು ಅನಾವರಣಗೊಳಿಸಿದರು.

ಶ್ರಾವಕಿಯರಿಂದ ಭಜನೆ, ಗ್ರೀಷ್ಮ ಇಜಿಲಾಂಪಾಡಿ ಅವರಿಂದ ಜಿನಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಜಗದ್ಗುರು ಪರಮಪೂಜ್ಯ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ನೀಡಿದ ಇಂದ್ರಧ್ವಜವನ್ನು ಪ್ರತಿಷ್ಠಾಪಿಸಲಾಯಿತು.

ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಪಣಿರಾಜ್ ಜೈನ್ ಕೊಕ್ಕಡ ಇವರು ಮಾಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಜಯ ಕುಮಾರ್ ಜೈನ್, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪಿ.ಎನ್. ರವಿರಾಜ್ ಬಂಗ, ಜಿನರಾಜ ಪೂವಣಿ, ರಾಜೇಂದ್ರ ಜೈನ್, ಫಣಿರಾಜ್ ಜೈನ್, ಸಂತೋಷ್ ಕುಮಾರ್, ವೀರೇಂದ್ರ ಕುಮಾರ್, ಅಭಿನಂದನ್ ಜೈನ್, ಅತೀಶಯ್ ಜೈನ್, ಜಿನೇಂದ್ರ ಕುಮಾರ್, ಗುಣಪಾಲ ಬಂಗ ಹಾಗೂ ಬಾರಿ ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.

ಪೂಜಾ ಕಾರ್ಯಕ್ರಮವನ್ನು ಪವನ್ ಪಂಡಿತ್, ವೀರಇಂದ್ರ ನೆರವೇರಿಸಿದರು. ಆಡಳಿತ ಮಂಡಳಿ ಸಂಚಾಲಕರಾದ ಡಾ. ಕೆ. ಜಯಕೀರ್ತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮೊಗ್ರು ಶ್ರೀರಾಮ ಶಿಶುಮಂದಿರದಲ್ಲಿ ಚಿಣ್ಣರ ಚಿಲಿಪಿಲಿ – 2025 ಬೇಸಿಗೆ ಶಿಬಿರ ಸಮಾರೋಪ

Suddi Udaya

ಮುಂಡಾಜೆ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನದಡಿ ಪ್ರತಿಜ್ಞಾವಿಧಿ ಬೋಧನೆ

Suddi Udaya

ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya
error: Content is protected !!