ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ 1008ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜಾ ಕಾರ್ಯಕ್ರಮವು ಡಿ.೨೯ರಂದು ನಡೆಯಿತು.

ಪರಮಪೂಜ್ಯ 108ಮುನಿಶ್ರೀ ಆದಿತ್ಯ ಸಾಗರ ಮಹಾರಾಜರು ಪಂಚಕಲ್ಯಾಣಗೊಂಡ 24 ತೀಥಂಕರರ ಜಿನ ಬಿಂಬಗಳನ್ನು ಶ್ರೀ ಕ್ಷೇತ್ರ ಚಂದ್ರಪುರಕ್ಕೆ ಆಶೀರ್ವಾದ ಮೂಲಕ ಪವನ್ ಪಂಡಿತ್ ಹಾಗೂ ಶ್ರೀವೀರ ಇಂದ್ರರವರ ಮೂಲಕ ಜಿನಬಿಂಬಗಳಿಗೆ ಜಲ, ಗಂಧ, ಸಿಯಾಳ ಹಾಲು ಮುಂತಾದ ದ್ರವ್ಯಗಳಿಂದ ಶ್ರಾವಕ ಶ್ರಾವಕಿಯರು ಅಭಿಷೇಕದೊಂದಿಗೆ ಅರಿಹಂತ ಇಂದ್ರರು 24 ಜಿನ ಬಿಂಬಗಳನ್ನು ಗಂಧಕುಟಿಯಲ್ಲಿ ಪ್ರತಿಷ್ಠಾಪಿಸಿದರು.

ಈ ಸಂದರ್ಭದಲ್ಲಿ ತ್ರಿಲೋಕ ಚಿಹ್ನೆಯ ನಾಮಫಲಕವನ್ನು ದಾನಿಗಳಾದ ಧರ್ಮಸ್ಥಳ ಕನ್ಯಾಡಿ ಆದೀಶ ಲಾಡ್ಜ್‌ನ ಮಾಲಕ ಪದ್ಮಪ್ರಸಾದ್ ಜೈನ್ ಇವರು ಅನಾವರಣಗೊಳಿಸಿದರು.

ಶ್ರಾವಕಿಯರಿಂದ ಭಜನೆ, ಗ್ರೀಷ್ಮ ಇಜಿಲಾಂಪಾಡಿ ಅವರಿಂದ ಜಿನಭಕ್ತಿ ಗೀತೆ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಹೊಂಬುಜದ ಪೀಠಾಧಿಪತಿಗಳಾದ ಜಗದ್ಗುರು ಪರಮಪೂಜ್ಯ ಶ್ರೀ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಯವರು ನೀಡಿದ ಇಂದ್ರಧ್ವಜವನ್ನು ಪ್ರತಿಷ್ಠಾಪಿಸಲಾಯಿತು.

ಮಧ್ಯಾಹ್ನ ಭೋಜನದ ವ್ಯವಸ್ಥೆಯನ್ನು ಪಣಿರಾಜ್ ಜೈನ್ ಕೊಕ್ಕಡ ಇವರು ಮಾಡಿದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ವಿಜಯ ಕುಮಾರ್ ಜೈನ್, ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಪಿ.ಎನ್. ರವಿರಾಜ್ ಬಂಗ, ಜಿನರಾಜ ಪೂವಣಿ, ರಾಜೇಂದ್ರ ಜೈನ್, ಫಣಿರಾಜ್ ಜೈನ್, ಸಂತೋಷ್ ಕುಮಾರ್, ವೀರೇಂದ್ರ ಕುಮಾರ್, ಅಭಿನಂದನ್ ಜೈನ್, ಅತೀಶಯ್ ಜೈನ್, ಜಿನೇಂದ್ರ ಕುಮಾರ್, ಗುಣಪಾಲ ಬಂಗ ಹಾಗೂ ಬಾರಿ ಸಂಖ್ಯೆಯಲ್ಲಿ ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.

ಪೂಜಾ ಕಾರ್ಯಕ್ರಮವನ್ನು ಪವನ್ ಪಂಡಿತ್, ವೀರಇಂದ್ರ ನೆರವೇರಿಸಿದರು. ಆಡಳಿತ ಮಂಡಳಿ ಸಂಚಾಲಕರಾದ ಡಾ. ಕೆ. ಜಯಕೀರ್ತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾಜಿಕ ಪರಿಶೋಧನೆ ಪೂರ್ವಭಾವಿ ಸಭೆ

Suddi Udaya

ಪಡಂಗಡಿ: ಕುದ್ರೆಂಜ ಬಳಿ ಸೇತುವೆ ಕುಸಿತ: ಸಂಪರ್ಕ ಕಡಿತ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ನಿಟ್ಟಡೆ ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಕುಂಭ ಕಾರ್ನಿವಾಲ್ ಕಾರ್ಯಕ್ರಮ

Suddi Udaya
error: Content is protected !!