23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ರಂಗಕಲೆಗಳ ಸ್ವರೂಪ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕ ಕೇವಲ ಶಿಕ್ಷಣ ನೀಡುವ ಶಿಕ್ಷಕನಾಗಬಾರದು, ಬದಲು ಎಲ್ಲಾ ಲಘುತನಗಳನ್ನು ದಾಟಿ ಗುರುವಾಗಬೇಕು. ಮಕ್ಕಳ ಜೀವನದಲ್ಲಿನ ದಾರಿ ನೇರಗೊಳಿಸುವ ಗುರುವು ಆಗಬೇಕು. ಜಗತ್ತಿನ ಗುರುತನಗಳ ಸ್ವೀಕರಿಸುವ ಲಘುತನ ಎಲ್ಲಾ ಶಿಕ್ಷಕರಲ್ಲಿರಬೇಕು ಎಂದು ಓದು, ಬರಹ, ಹಾಡು, ಸುತ್ತಾಟ, ಕಲೆ ಹಾಗೂ ರಂಗಭೂಮಿ ಹೀಗೆ ನಾನಾ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ರಂಗಕಲಾವಿದ ನಾದ ಎಂಬ ನಾಮಾಂಕಿತರಾದ ಭಾಸ್ಕರ್ ಮಣಿನಾಲ್ಕೂರು ಮಾತನಾಡುತ್ತಾ ಕಲಿಸುವ ಗುರು ಸಣ್ಣವನಾದರೆ, ಕಲಿಯುವ ಶಿಷ್ಯನು ಸಣ್ಣತನಕ್ಕೆ ಸೀಮಿತನಾಗುತ್ತಾನೆ. ಈ ಜಗತ್ತಿನಲ್ಲಿ ಕಲಿಕೆಯು ಮುಗಿಯುವಂತಹದಲ್ಲ. ಗುರುವಾದವನು ಸೋತ ಮಕ್ಕಳ ಜೊತೆ ನಿಲ್ಲಬೇಕು ಎಂದು ತಮ್ಮ ಸುಮಧುರ ಗಾಯನ ಹಾಗೂ ಎಕ್ತಾರಿಯ ಗಾಯನದ ಮೂಲಕ ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಮಾತನಾಡಿ ಇತ್ತೀಚಿನ ಕಾಲದಲ್ಲಿ ಗುರುವನ್ನು ಕೇಳಿ ಕಲಿಯುವವರೇ ಹೆಚ್ಚು ಅದರ ಬದಲು ಗುರುವನ್ನು ನೋಡಿ ಕಲಿಯುವ ಹಂತಕ್ಕೆ ಗುರು ಬೆಳೆಯಬೇಕು. ಶಿಕ್ಷಕರು ಕೇವಲ ಆದರ್ಶಗಳನ್ನು ಕಲಿಸುವುದು ಮಾತ್ರವಲ್ಲದೆ ಅದನ್ನು ತಮ್ಮ ಜೀವನದಲ್ಲಿ ಅನುಸರಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಜಶೇಖರ್ ಹಳೆಮನೆ, ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಉಪನ್ಯಾಸಕ ವೃಂದ ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಬಿ.ಎಡ್. ಪ್ರಶಿಕ್ಷಣಾರ್ಥಿ ತೇಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಪ್ರತಿಷ್ಠಿತ ಬಿಲ್ಲವ ಗುತ್ತು ಮನೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಪಹಣಿಗಳಿಗೆ ಆಧಾರ್ ಜೋಡನೆ ಆಂದೋಲನ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya
error: Content is protected !!