23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ರಂಗಕಲೆಗಳ ಸ್ವರೂಪ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕ ಕೇವಲ ಶಿಕ್ಷಣ ನೀಡುವ ಶಿಕ್ಷಕನಾಗಬಾರದು, ಬದಲು ಎಲ್ಲಾ ಲಘುತನಗಳನ್ನು ದಾಟಿ ಗುರುವಾಗಬೇಕು. ಮಕ್ಕಳ ಜೀವನದಲ್ಲಿನ ದಾರಿ ನೇರಗೊಳಿಸುವ ಗುರುವು ಆಗಬೇಕು. ಜಗತ್ತಿನ ಗುರುತನಗಳ ಸ್ವೀಕರಿಸುವ ಲಘುತನ ಎಲ್ಲಾ ಶಿಕ್ಷಕರಲ್ಲಿರಬೇಕು ಎಂದು ಓದು, ಬರಹ, ಹಾಡು, ಸುತ್ತಾಟ, ಕಲೆ ಹಾಗೂ ರಂಗಭೂಮಿ ಹೀಗೆ ನಾನಾ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ರಂಗಕಲಾವಿದ ನಾದ ಎಂಬ ನಾಮಾಂಕಿತರಾದ ಭಾಸ್ಕರ್ ಮಣಿನಾಲ್ಕೂರು ಮಾತನಾಡುತ್ತಾ ಕಲಿಸುವ ಗುರು ಸಣ್ಣವನಾದರೆ, ಕಲಿಯುವ ಶಿಷ್ಯನು ಸಣ್ಣತನಕ್ಕೆ ಸೀಮಿತನಾಗುತ್ತಾನೆ. ಈ ಜಗತ್ತಿನಲ್ಲಿ ಕಲಿಕೆಯು ಮುಗಿಯುವಂತಹದಲ್ಲ. ಗುರುವಾದವನು ಸೋತ ಮಕ್ಕಳ ಜೊತೆ ನಿಲ್ಲಬೇಕು ಎಂದು ತಮ್ಮ ಸುಮಧುರ ಗಾಯನ ಹಾಗೂ ಎಕ್ತಾರಿಯ ಗಾಯನದ ಮೂಲಕ ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಮಾತನಾಡಿ ಇತ್ತೀಚಿನ ಕಾಲದಲ್ಲಿ ಗುರುವನ್ನು ಕೇಳಿ ಕಲಿಯುವವರೇ ಹೆಚ್ಚು ಅದರ ಬದಲು ಗುರುವನ್ನು ನೋಡಿ ಕಲಿಯುವ ಹಂತಕ್ಕೆ ಗುರು ಬೆಳೆಯಬೇಕು. ಶಿಕ್ಷಕರು ಕೇವಲ ಆದರ್ಶಗಳನ್ನು ಕಲಿಸುವುದು ಮಾತ್ರವಲ್ಲದೆ ಅದನ್ನು ತಮ್ಮ ಜೀವನದಲ್ಲಿ ಅನುಸರಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಜಶೇಖರ್ ಹಳೆಮನೆ, ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಉಪನ್ಯಾಸಕ ವೃಂದ ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಬಿ.ಎಡ್. ಪ್ರಶಿಕ್ಷಣಾರ್ಥಿ ತೇಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕುಕ್ಕೇಡಿ: ಪಂಡಿಜೆ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

3ನೇ ಹಂತದ ಪಿಎಂಶ್ರೀ ಯೋಜನೆಗೆ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆ ಆಯ್ಕೆ

Suddi Udaya

ಡಾ. ಯು.ಸಿ. ಪೌಲೋಸ್‌ರವರ ಸೇವೆಗೆ “ಭಾರತದ ಜವಾಬ್ದಾರಿಯುತ ಮತ್ತು ಸಕ್ರಿಯ ನಾಗರಿಕ ಪ್ರಶಸ್ತಿ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya
error: Content is protected !!