25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು.

ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮಂಗಳೂರಿನ ಸಿಇಎನ್ (ಸೈಬರ್ ಎಕನಾಮಿಕ್ಸ್ ಆಂಡ್ ನಾರ್ಕೋಟಿಕ್ಸ್ ಕ್ರೈಮ್ಸ್) ಪೊಲೀಸ್ ಠಾಣಾ ಡಿ.ವೈ.ಎಸ್.ಪಿ. ಮಂಜುನಾಥ್ ಆರ್.ಜಿ. ಉದ್ಘಾಟಿಸಿ ಮಾತನಾಡಿ, ಸೈಬರ್ ಅಪರಾಧಗಳಿಗೆ ಯುವ ಜನಾಂಗ ಬಲಿಯಾಗುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು.

ಸೈಬರ್ ತೊಂದರೆಗೆ ಒಳಗಾದಾಗ ಧೃತಿಗೆಡದೆ, ಧೈರ್ಯದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡು ನಡೆದ ಅಪರಾಧದ ಕುರಿತ ಮಾಹಿತಿಯನ್ನು, ದಾಖಲೆಗಳನ್ನು ಜಿಲ್ಲಾ ಅಪರಾಧ ವಿಭಾಗಕ್ಕೆ ನೀಡಬೇಕು ಎಂದು ತಿಳಿಸಿದರು.

ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಡಿ. ಮಾತನಾಡಿ, ವಿವಿಧ ಸೈಬರ್ ಅಪರಾಧ ಪ್ರಕರಣಗಳ ಬಗ್ಗೆ ವಿವರವಾದ ಮಾಹಿತಿಗಳನ್ನು ವಿವರವಾಗಿ ತಿಳಿಸಿದರು ಹಾಗೂ ಸೈಬರ್ ವಂಚನೆಗೆ ಒಳಗಾದಾಗ (೧೯೩೦ ಅಥವಾ ೧೧೨ ಗೆ ಕರೆ ಮಾಡಿದಾಗ ೫ ನಿಮಿಷದ ಒಳಗೆ ಹತ್ತಿರದ ಪೋಲೀಸರ ಬರುವು ಕುರಿತು ಹಾಗೂ ಅಲ್ಲಿಯವರೆಗೆ) ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್, ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ರಾವ್, ಮಂಜುಶ್ರೀ ಪ್ರಿಂಟರ್ಸ್‌ನ ವ್ಯವಸ್ಥಾಪಕ ಶೇಖರ್ ಟಿ. ಉಪಸ್ಥಿತರಿದ್ದರು.

ಸಹಾಯಕ ವ್ಯವಸ್ಥಾಪಕ ರವಿ ಪರಕ್ಕಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮುಂಬೈ ಭಜನಾ ಮಂಡಳಿಗಳ ಒಕ್ಕೂಟದ ಸಂಸ್ಥೆ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಮಹಾರಾಷ್ಟ್ರ ಘಟಕ ದಿಂದ ಭಜಕ ವಿ ಹರೀಶ್ ನೆರಿಯ ರವರಿಗೆ ಗುರುವಂದನೆ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
error: Content is protected !!