24.4 C
ಪುತ್ತೂರು, ಬೆಳ್ತಂಗಡಿ
April 19, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಡಂತ್ಯಾರು ಶಾಖೆಯಲ್ಲಿ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ

ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಮಡಂತ್ಯಾರು ಶಾಖೆಯ 2ನೇ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ಮಡವು, ಜೆಸಿಐ ಮಡಂತ್ಯಾರು, ಇವರ ಜಂಟಿ ಸಹಯೋಗದೊಂದಿಗೆ ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇವರ ವೈದರ ತಂಡದೊಂದಿಗೆ ಉಚಿತ ಬೃಹತ್ ವೈದ್ಯಕೀಯ ನೇತ್ರ ತಪಾಸಣಾ ಮತ್ತು ದಂತಾ ತಪಾಸಣೆ ಚಿಕಿತ್ಸಾ ಶಿಬಿರ ವನ್ನು ಜ. 5 ರಂದು ಸಮಯ ಪೂವಾಹ್ನ 9.30ರಿಂದ ಅಪರಾಹ್ನ 12.30 ರವರೆಗೆ ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೇಕ್ಸ್, ಮುಖ್ಯ ರಸ್ತೆ ಮಡಂತ್ಯಾರು ಇಲ್ಲಿ ಆಯೋಜಿಸಲಾಗಿದೆ.

ಈ ವೈದ್ಯಕೀಯ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ , ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಇ.ಸಿ.ಜಿ, ಕಿವಿ-ಮೂಗು,ಗಂಟಲು ತಪಾಸಣೆ, ಚರ್ಮರೋಗ ತಪಾಸಣೆ, ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿ, ಇತರ ವೈದ್ಯಕೀಯ ಸೇವೆಗಳು ಹಾಗೂ ಹೆಚ್ಚಿನ ಚಿಕಿತ್ಸೆಗೆ ಸೂಕ್ತ ಸಲಹೆ ನೀಡುವುದು.


ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.

Related posts

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ಶ್ರೀ ಲಕ್ಷ್ಮಿ ಫ್ಯಾನ್ಸಿಯಲ್ಲಿ ಚಪ್ಪಲ್ ಮೇಲೆ 10-50% ಡಿಸ್ಕೌಂಟ್ ಸೇಲ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!