29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು.


ಈ ಸಂದರ್ಭದಲ್ಲಿ ದೀಪ ಪ್ರಜ್ವಲನೆಯನ್ನು ಶಾಸಕ ಹರೀಶ್ ಪೂಂಜ , ಅಳದಂಗಡಿ ವೈದ್ಯರಾದ ಡಾ| ಎನ್. ಎಂ. ತುಳುಪುಳೆ, ಹಾಗೂ ಧರ್ಮಸ್ಥಳದ ಭುಜಬಲಿಯವರು ನೆರವೇರಿಸಿಕೊಟ್ಟರು.

ಅರ್ಚಕರಾದ ವೇ| ಮೂ| ದಿನೇಶ್ ಭಟ್ ಧಾರ್ಮಿಕ ವಿಧಿಗಳನ್ನು ನಡೆಸಿಕೊಟ್ಟರು. ಕು।ಸಿದ್ಧಿ ಚೇರ್ಕೂಡ್ಲು ಭಕ್ತಿ ಸ್ತುತಿಯನ್ನು ನಡೆಸಿಕೊಟ್ಟರು. ಹರೀಶ್ ಪೂಂಜ ಇಲ್ಲಿನ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆಯನ್ನು ಸೂಚಿಸಿ ಇಂತಹ ಕಾರ್ಯಗಳು ಎಲ್ಲಾ ಶ್ರದ್ಧಾಕೇಂದ್ರಗಳಿಗೂ ವಿಸ್ತರಿಸುವಂತಾಗಲಿ ಎಂದು ಹಾರೈಸಿದರು.

ದೇವಸ್ಥಾನ ಟ್ರಸ್ಟ್ ನ ಅಧ್ಯಕ್ಷ ದ ಹರೀಶ್ ಸಾಲ್ಯಾನ್ ಹಾಗೂ ಟ್ರಸ್ಟ್ ನ ಸದಸ್ಯರು ಹಾಗೂ ಭಗವದ್ಭಕ್ತರು ಭಾಗವಹಿಸಿದರು.
ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಪ್ರಬಂಧಕರಾದ ಎಸ್ ಎನ್ ಭಟ್, ನಾವೂರಿನ ವೈದ್ಯರಾದ ಡಾ। ಪ್ರದೀಪ್ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿಗಳಾದ ಧರ್ಣಪ್ಪ ಮೂಲ್ಯ ಧನ್ಯವಾದವನ್ನಿತ್ತರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ನಾಳ ವರ್ಷವಧಿ ಜಾತ್ರಾ ಮಹೋತ್ಸವ ಲೆಕ್ಕಪತ್ರ ಮಂಡನೆ, ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ. (ಜನಾರ್ದನ ) ಹಿ.ಪ್ರಾ. ಶಾಲೆಯ ಶತಮಾನೋತ್ಸವ ಸಂಭ್ರಮಕ್ಕೆ ಚಾಲನೆ 

Suddi Udaya
error: Content is protected !!