25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ

ಉಜಿರೆ ಲಲಿತನಗರದ ಸುದರ್ಶನ ಮನೆಯಲ್ಲಿ ಡಿ.೨೯ರಂದು ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ನಡೆಯಿತು.

ಸಂಸ್ಥೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ, ಗುರುವಾಯನಕೆರೆ ಟ್ರಸ್ಟಿ ಶಿತಿಕಂಠ ಭಟ್ ಉಜಿರೆ, ಸಂಚಾಲಕ ಮಹೇಶ ಕನ್ಯಾಡಿ ಉಪಸ್ಥಿತರಿದ್ದರು.

ಯಕ್ಷಭಾರತಿ ಸಂಸ್ಥೆಯ ಆಹ್ವಾನಿತ ಸದಸ್ಯ ಮುರಳಿಕೃಷ್ಣ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಶೋಭಾ ಸುರೇಶ ಕುದ್ರೆಂತ್ತಾಯರನ್ನು ಅಭಿನಂದಿಸಿ ಮಾತನಾಡಿದರು. ದಶಮಾನೋತ್ಸವ ಸಮಿತಿಯ ಅಧ್ಯಕ್ಷ ರವೀಂದ್ರ ಶೆಟ್ಟಿ ಬಳಂಜ ಸ್ವಾಗತಿಸಿರು. ರಾಮಕೃಷ್ಣ ಭಟ್ ಬಳೆಂಜ ಗೌರವ ಪತ್ರ ವಾಚಿಸಿದರು. ಕಾರ್ಯಕ್ರಮದ ಆಯೋಜಕ ನೀಲಕಂಠ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ವಂದಿಸಿದರು.

ಬಳಿಕ ಖ್ಯಾತ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ಪ್ರಸಂಗ ಶರಸೇತು ಬಂಧನ ಪ್ರಸ್ತುತಿಯಾಯಿತು. ನೀಲಕಂಠ ಭಟ್ ಮತ್ತು ಮನೆಯವರು ಪ್ರಾಯೋಜಿಸಿದ ತಾಳಮದ್ದಳೆಯ ಹಿಮ್ಮೇಳದಲ್ಲಿ ಭಾಗವತರಾಗಿ ಮಹೇಶ ಕನ್ಯಾಡಿ ಚೆಂಡೆ ಮದ್ದಳೆ ಯಲ್ಲಿ ಶಿತಿಕಂಠ ಭಟ್ ಉಜಿರೆ ಮತ್ತು ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ ಸಹಕರಿಸಿದರು.

ಮುಮ್ಮೇಳದಲ್ಲಿ ಅರ್ಜುನನಾಗಿ ಪೆರ್ಮುದೆ ಜಯಪ್ರಕಾಶ್ ಶೆಟ್ಟಿ ಹನುಮಂತನಾಗಿ ವಾಸುದೇವ ರಂಗ ಭಟ್ ಮಧೂರು ಕೃಷ್ಣನಾಗಿ ಸುರೇಶ ಕುದ್ರಂತಾಯ ಉಜಿರೆ ಪಾತ್ರ ನಿರ್ವಹಿಸಿದರು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಎಕ್ಸೆಲ್ ಕಾಲೇಜಿನ ಜೆಇಇ ಸಾಧಕರಿಗೆ ಗೌರವಾರ್ಪಣೆ, ನಗದು ಬಹುಮಾನ ಹಸ್ತಾಂತರ

Suddi Udaya
error: Content is protected !!