22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ರಂಗಕಲೆಗಳ ಸ್ವರೂಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ ಉಜಿರೆ ಇಲ್ಲಿ ರಂಗಕಲೆಗಳ ಸ್ವರೂಪ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕ ಕೇವಲ ಶಿಕ್ಷಣ ನೀಡುವ ಶಿಕ್ಷಕನಾಗಬಾರದು, ಬದಲು ಎಲ್ಲಾ ಲಘುತನಗಳನ್ನು ದಾಟಿ ಗುರುವಾಗಬೇಕು. ಮಕ್ಕಳ ಜೀವನದಲ್ಲಿನ ದಾರಿ ನೇರಗೊಳಿಸುವ ಗುರುವು ಆಗಬೇಕು. ಜಗತ್ತಿನ ಗುರುತನಗಳ ಸ್ವೀಕರಿಸುವ ಲಘುತನ ಎಲ್ಲಾ ಶಿಕ್ಷಕರಲ್ಲಿರಬೇಕು ಎಂದು ಓದು, ಬರಹ, ಹಾಡು, ಸುತ್ತಾಟ, ಕಲೆ ಹಾಗೂ ರಂಗಭೂಮಿ ಹೀಗೆ ನಾನಾ ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ರಂಗಕಲಾವಿದ ನಾದ ಎಂಬ ನಾಮಾಂಕಿತರಾದ ಭಾಸ್ಕರ್ ಮಣಿನಾಲ್ಕೂರು ಮಾತನಾಡುತ್ತಾ ಕಲಿಸುವ ಗುರು ಸಣ್ಣವನಾದರೆ, ಕಲಿಯುವ ಶಿಷ್ಯನು ಸಣ್ಣತನಕ್ಕೆ ಸೀಮಿತನಾಗುತ್ತಾನೆ. ಈ ಜಗತ್ತಿನಲ್ಲಿ ಕಲಿಕೆಯು ಮುಗಿಯುವಂತಹದಲ್ಲ. ಗುರುವಾದವನು ಸೋತ ಮಕ್ಕಳ ಜೊತೆ ನಿಲ್ಲಬೇಕು ಎಂದು ತಮ್ಮ ಸುಮಧುರ ಗಾಯನ ಹಾಗೂ ಎಕ್ತಾರಿಯ ಗಾಯನದ ಮೂಲಕ ತಿಳಿಸಿಕೊಟ್ಟರು.


ಕಾರ್ಯಕ್ರಮದ ಅಧ್ಯಕ್ಷ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಸಲ್ಡಾನ ಮಾತನಾಡಿ ಇತ್ತೀಚಿನ ಕಾಲದಲ್ಲಿ ಗುರುವನ್ನು ಕೇಳಿ ಕಲಿಯುವವರೇ ಹೆಚ್ಚು ಅದರ ಬದಲು ಗುರುವನ್ನು ನೋಡಿ ಕಲಿಯುವ ಹಂತಕ್ಕೆ ಗುರು ಬೆಳೆಯಬೇಕು. ಶಿಕ್ಷಕರು ಕೇವಲ ಆದರ್ಶಗಳನ್ನು ಕಲಿಸುವುದು ಮಾತ್ರವಲ್ಲದೆ ಅದನ್ನು ತಮ್ಮ ಜೀವನದಲ್ಲಿ ಅನುಸರಿಸಬೇಕು ಎಂದರು.


ಕಾರ್ಯಕ್ರಮದಲ್ಲಿ ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕ ರಾಜಶೇಖರ್ ಹಳೆಮನೆ, ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನ ಉಪನ್ಯಾಸಕ ವೃಂದ ಮತ್ತು ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು. ದ್ವಿತೀಯ ವರ್ಷದ ಬಿ.ಎಡ್. ಪ್ರಶಿಕ್ಷಣಾರ್ಥಿ ತೇಜಾಕ್ಷಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya

ಎಲ್.ಸಿ.ಆರ್. ಇಂಡಿಯನ್ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳಿಗೆ “ಯಶಸ್ವಿ ನಿರ್ವಹಣಾ ತತ್ವಗಳ” ಕುರಿತು ವಿಶೇಷ ಮಾರ್ಗದರ್ಶನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ: ಇನ್ನೂ ಕೇವಲ ನಾಲ್ಕು ದಿನ ಮಾತ್ರ

Suddi Udaya

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

Suddi Udaya
error: Content is protected !!